ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಹೆಗಲತ್ತಿಯ ಶ್ರೀ ಕ್ಷೇತ್ರದಲ್ಲಿ ನಾಗಯಕ್ಷೆ ದೇವಿ, ನವಗ್ರಹ ಹಾಗೂ ನಾಗದೇವರ 12ನೇ ವಾರ್ಷಿಕೋತ್ಸವದ (Anniversary) ಪೂಜಾ ಕಾರ್ಯಕ್ರಮವು ಆರಂಭಗೊಂಡಿದೆ. ಮಾರ್ಚ್ 8ರವರೆಗೆ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆಯಲಿವೆ ಎಂದು ದೇವಸ್ಥಾನ ಸೇವಾ ಸಮಿತಿಯ ಪ್ರಮುಖರಾದ ಗಜೇಂದ್ರನಾಥ್ ತಿಳಿಸಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?
ಶುಕ್ರವಾರ ಮಹಾಗಣಪತಿ ಪೂಜೆ, ನವಚಂಡಿಕಾ ಹವನ ಹಾಗೂ ಆಶ್ಲೇಷ ಬಲಿ ನಡೆಯಿತು. ಮಾ. 7ರಂದು ಪಲ್ಲಕ್ಕಿಯಲ್ಲಿ ದೇವರ ಆಗಮನ, ಮಹಾಮಂಗಳಾರತಿ ಮತ್ತು ಅನ್ನಸಂತರ್ಪಣೆ ನಡೆಯಲಿದೆ ಎಂದು ಹೇಳಿದರು.

ವಿವಿಧ ದೇವಸ್ಥಾನಗಳ 9 ಪಲ್ಲಕ್ಕಿಗಳು ಆಗಮಿಸಲಿದ್ದು, ಬಂಗಾರಮಕ್ಕಿ ದೇವಸ್ಥಾನದ ಶ್ರೀಗಳು ಸಾನಿಧ್ಯ ವಹಿಸಲಿದ್ದಾರೆ. ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಉಪಸ್ಥಿತರಿರುವರು ಎಂದರು.
ಅದೇ ದಿನ ರಾತ್ರಿ ನಾಗಮಂಡಲ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಮಾ. 8ರಂದು ಪಲ್ಲಕ್ಕಿ ದೇವರ ಆರಾಧನೆಯೊಂದಿಗೆ ಜಾತ್ರೆ ಸಮಾಪನಗೊಳ್ಳಲಿದೆ ಎಂದು ತಿಳಿಸಿದರು.

LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





