ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಬೊಮ್ಮನಕಟ್ಟೆಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಆಟೋ ರಿಕ್ಷಾವನ್ನು (auto rickshaw) ಕಿಡಿಗೇಡಿಗಳು ಕಳ್ಳತನ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಆಶ್ರಯ ಬಡಾವಣೆಯ ನಿವಾಸಿ ಕೃಷ್ಣ.ಹೆಚ್ ಎಂಬುವವರು ತಮ್ಮ ಅಳಿಯನ ಹೆಸರಿನಲ್ಲಿದ್ದ ಪ್ಯಾಸೆಂಜರ್ ಆಟೋ ರಿಕ್ಷಾವನ್ನು ಮನೆ ಮುಂದೆ ನಿಲ್ಲಿಸಿದ್ದರು. ಕಳೆದ 2025ರ ಮಾರ್ಚ್ 20ರಂದು ಮಧ್ಯಾಹ್ನ ಕುಟುಂಬ ಸಮೇತ ದೇವಸ್ಥಾನಕ್ಕೆ ತೆರಳಿದ್ದ ಕೃಷ್ಣ ಅವರು, ಮಾರ್ಚ್ 24ರಂದು ರಾತ್ರಿ ವಾಪಸ್ ಬಂದಾಗ ಆಟೋ ಕಾಣಿಸಿರಲಿಲ್ಲ.

ಆಟೋ ರಿಕ್ಷಾವನ್ನು ತನ್ನ ಅಳಿಯನೇ ತೆಗೆದುಕೊಂಡು ಹೋಗಿರಬಹುದು ಎಂದು ಕೃಷ್ಣ ಭಾವಿಸಿದ್ದರು. ಇದೇ ಕಾರಣಕ್ಕೆ ಕೃಷ್ಣ ಅವರು ಈವರೆಗೆ ದೂರು ನೀಡಿರಲಿಲ್ಲ. ಆದರೆ, ಇತ್ತೀಚೆಗೆ ವಿಚಾರಿಸಿದಾಗ ಅಳಿಯ ಆಟೋ ತೆಗೆದುಕೊಂಡು ಹೋಗಿಲ್ಲ ಎಂಬ ವಿಷಯ ಗೊತ್ತಾಗಿದೆ. ಈ ಹಿನ್ನೆಲೆ ಘಟನೆ ನಡೆದು ಸುಮಾರು ಒಂದು ವರ್ಷದ ನಂತರ ಕೃಷ್ಣ ದೂರು ನೀಡಿದ್ದಾರೆ.
ಇದನ್ನೂ ಓದಿ – ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?
ಅಂದಾಜು ₹2,44,000 ಮೌಲ್ಯದ ಆಟೋ ರಿಕ್ಷಾ ಕಳುವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು















