ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಹುಲಿಗಣತಿಗಾಗಿ ಅಳವಡಿಸಲಾಗಿದ್ದ ಎರಡು ಅತ್ಯಾಧುನಿಕ ಕ್ಯಾಮರಾಗಳು ಕಳ್ಳತನವಾಗಿವೆ (cameras stolen). ಅಖಿಲ ಭಾರತ ರಾಷ್ಟ್ರೀಯ ಹುಲಿಗಣತಿ 2026ರ ಕಾರ್ಯಾಚರಣೆಯ ಅಂಗವಾಗಿ ಈ ಕ್ಯಾಮರಾಗಳನ್ನು ಸಕ್ರೆಬೈಲ್ ವನ್ಯಜೀವಿ ವಲಯದ ವಿವಿಧೆಡೆ ಅಳವಡಿಸಲಾಗಿತ್ತು. ಕಳುವಾದ ಈ ಎರಡು ಕಡ್ಡಿಬ್ಯಾಕ್ ಕಂಪನಿಯ ಕ್ಯಾಮರಾಗಳ ಮೌಲ್ಯ ₹50,000 ಎಂದು ಅಂದಾಜಿಸಲಾಗಿದೆ.
ಇದನ್ನೂ ಓದಿ – ಮಾಜಿ ಮಿನಿಸ್ಟರ್ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ಅಹೋರಾತ್ರಿ ಧರಣಿ
ಮಾರ್ಚ್ 21ರ ಮಧ್ಯಾಹ್ನ ಉಪ ವಲಯ ಅರಣ್ಯಾಧಿಕಾರಿ ಸತೀಶ್ ಅವರು ಭೇಟಿ ನೀಡಿದ್ದಾಗ ಶಾಂತಣ್ಣ ಕೆರೆ ಸಮೀಪ ಅರಣ್ಯ ಪ್ರದೇಶದಲ್ಲಿ ಅಳವಡಿಸಿದ ಜಾಗದಲ್ಲಿಯೇ ಈ ಕ್ಯಾಮರಾಗಳು ಇದ್ದವು. ಮಾರ್ಚ್ 22ರಂದು ಬೆಳಗ್ಗೆ ಸಿಬ್ಬಂದಿ ಪರಿಶೀಲಿಸಿದಾಗ ಕ್ಯಾಮರಾಗಳು ನಾಪತ್ತೆಯಾಗಿದ್ದವು. ಅಪರಿಚಿತರು ಅರಣ್ಯದೊಳಗೆ ಅತಿಕ್ರಮವಾಗಿ ಪ್ರವೇಶಿಸಿ ಈ ಕೃತ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸಕ್ರೆಬೈಲ್ ವಲಯ ಅರಣ್ಯಾಧಿಕಾರಿ ವಿನಯ್.ಜಿ.ಆರ್ ಈ ಕುರಿತು ದೂರು ನೀಡಿದ್ದಾರೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LATEST NEWS
- ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

- ಮಾರ್ಚ್ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

- ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

- ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು














