ಶಿವಮೊಗ್ಗ: ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ಬಗ್ಗೆ ಫೇಸ್ಬುಕ್ನಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ (FIR filed) ದಾಖಲಾಗಿದೆ.
ಸುದ್ದಿಯ ಮುಂದಿನ ಭಾಗ ಕೆಳಗಿದೆ
ಏನಿದು ಕೇಸ್? ನಿಂದನೆ ಮಾಡಿದ್ದೆಲ್ಲಿ?

ಮಾರ್ಚ್ 17ರಂದು ಕಿಮ್ಮನೆ ರತ್ನಾಕರ್ ಅವರು ನಡೆಸಿದ್ದ ಪತ್ರಿಕಾಗೋಷ್ಠಿಯನ್ನು ನೆಲದ ಧ್ವನಿ ಎಂಬ ಫೇಸ್ಬುಕ್ ಪುಟದಲ್ಲಿ ಪ್ರಕಟಿಸಲಾಗಿತ್ತು. ಇದರ ಅಡಿ ಕಾಮೆಂಟ್ ಮಾಡಿದ್ದ ವ್ಯಕ್ತಿಯೊಬ್ಬ, ಕಿಮ್ಮನೆ ರತ್ನಾಕರ್ ಅವರ ವಿರುದ್ಧ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

ಇದನ್ನೂ ಓದಿ – ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?


