ತೀರ್ಥಹಳ್ಳಿ: ರಸ್ತೆಗೆ ಅಡ್ಡ ಬಂದ ಕಾಳಿಂಗ ಸರ್ಪವನ್ನು ರಕ್ಷಿಸಲು ಹೋಗಿ ಅಡಿಕೆ ತುಂಬಿದ ಲಾರಿಯೊಂದು (arecanut truck) ಪಲ್ಟಿಯಾಗಿದೆ.
ಸುದ್ದಿಯ ಮುಂದಿನ ಭಾಗ ಕೆಳಗಿದೆ
ಇದನ್ನೂ ಓದಿ – ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಿರುದ್ಧ ಕಾಮೆಂಟ್ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಸಾಗರದಿಂದ ಕಾರ್ಕಳಕ್ಕೆ ಚಾಲಿ ಅಡಿಕೆ ತುಂಬಿಕೊಂಡು ತೆರಳುತ್ತಿದ್ದ ಲಾರಿಗೆ ಹಿರೇಸರದಲ್ಲಿ ಕಾಳಿಂಗ ಸರ್ಪ ರಸ್ತೆಗೆ ಅಡ್ಡ ಬಂದಿದೆ. ಹಾವಿನ ಮೇಲೆ ವಾಹನ ಹರಿಸುವುದನ್ನು ತಡೆಯಲು ಚಾಲಕ ಬ್ರೇಕ್ ಹಾಕಿದ್ದಾರೆ. ಈ ವೇಳೆ ನಿಯಂತ್ರಣ ತಪ್ಪಿದ ವಾಹನ ರಸ್ತೆಯಲ್ಲೇ ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ ಯಾರಿಗು ಹಾನಿಯಾಗಿಲ್ಲ.

ಕಾರ್ಯನಿಮಿತ್ತ ಇದೇ ಮಾರ್ಗದಲ್ಲಿ ತೆರಳುತ್ತಿದ್ದ ಶಾಸಕ ಆರಗ ಜ್ಞಾನೇಂದ್ರ ಅವರು ಅಪಘಾತ ಕಂಡ ತಕ್ಷಣ ತಮ್ಮ ಕಾರನ್ನು ನಿಲ್ಲಿಸಿ ಸ್ಥಳಕ್ಕೆ ಧಾವಿಸಿದರು. ಲಾರಿ ಚಾಲಕನನ್ನು ಮಾತನಾಡಿಸಿ, ಆರೋಗ್ಯ ವಿಚಾರಿಸಿದರು.


