ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹೊಳೆಹೊನ್ನೂರು: ಮೈದೊಳಲಿನಲ್ಲಿ ಶನಿವಾರ ಆಂಜನೇಯ ಸ್ವಾಮಿಯ ಬ್ರಹ್ಮ ರಥೋತ್ಸವ (Rathotsava) ಹಾಗೂ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು.
ಮಂಗಳವಾರ ಕೊಡಿ ಮಲ್ಲೇಶ್ವರ ಸ್ವಾಮಿ ದೇವಸ್ಥಾನದ ಬಳಿ ಕೆಂಡಾರ್ಚನೆಯೊಂದಿಗೆ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಗುರುವಾರ ಉಚ್ಚಯ್ಯ ಉತ್ಸವ, ಶುಕ್ರವಾರ ಮುಂಜಾನೆ ನಡೆದ ರಥೋತ್ಸವದಲ್ಲಿ ಆಂಜನೇಯ ಸ್ವಾಮಿಗೆ ಪೂಜೆ ಸಲ್ಲಿಸಿ ರಥ ಎಳೆದು ಭಕ್ತಿ ಸಮರ್ಪಿಸಿದರು. ಇಷ್ಟಾರ್ಥ ಸಿದ್ಧಿಗಾಗಿ ಕೆಲವರು ರಥದ ಕಳಸಕ್ಕೆ ಬಾಳೆಹಣ್ಣು ಎಸೆದರು.

ಹರಕೆ ಹೊತ್ತವರು ಮಕ್ಕಳ ಜವಳ ತೆಗೆಸಿ ಭಕ್ತಿ ಸಮರ್ಪಿಸಿ, ಹರಕೆ ಕಾಣಿಕೆಗಳನ್ನು ತೀರಿಸಿದರು. ಡೊಳ್ಳು, ತಮಟೆ, ವೀರಗಾಸೆ ನೃತ್ಯ ಮೇಳಗಳು ರಾಜಬೀದಿ ಉತ್ಸವಕ್ಕೆ ಮೆರುಗು ನೀಡಿದವು. ಗ್ರಾಮಸ್ಥರು ಭಕ್ತರಿಗೆ ಕೋಸಂಬರಿ, ಪಾನಕ ಹಂಚಿದರು. ಶನಿವಾರ ಸಂಜೆ ಗ್ರಾಮದ ಗಡಿಗೆ ಚರಗ ಚೆಲ್ಲುವುದರೊಂದಿಗೆ ರಥೋತ್ಸವ ಮುಕ್ತಾಯವಾಯಿತು. ಆಂಜನೇಯ ಸ್ವಾಮಿ ಸೇವಾ ಸಮಿತಿ ಜಾತ್ರಾ ಮಹೋತ್ಸವನ್ನು ನಿರ್ವಹಿಸಿತು.
ಇದನ್ನೂ ಓದಿ – ಹೊಳೆಹೊನ್ನೂರಿನ ಚನ್ನಗಿರಿ ರಸ್ತೆಯಲ್ಲಿ ಅಪಘಾತ, ಆಸ್ಪತ್ರೆಗೆ ಸಾಗಿಸುವಾಗ ವ್ಯಕ್ತಿ ಸಾವು, ಹೇಗಾಯ್ತು ಘಟನೆ?
LATEST NEWS
- ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

- ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

- ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

- ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

- ATNC, ಕಮಲಾ ನೆಹರು ಕಾಲೇಜು ವಿದ್ಯಾರ್ಥಿಗಳಿಂದ ವಿಭಿನ್ನ ಮನವಿ, ಏನಿದು?

About The Editor
ನಿತಿನ್ ಆರ್.ಕೈದೊಟ್ಲು














