ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಟಿಪ್ಪು ನಗರದಲ್ಲಿ ಯುವಕನೊಬ್ಬ ವೃದ್ಧೆಯ (woman) ಮೇಲೆ ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಿದ್ದಾನೆ. 62 ವರ್ಷದ ಮಹಿಳೆ (ಹೆಸರು ಗೌಪ್ಯ) ಹಲ್ಲೆಗೊಳಗಾಗಿದ್ದಾರೆ.
ಮಾರ್ಚ್ 27ರಂದು ಬೆಳಗ್ಗೆ ಸುಮಾರು 5 ಗಂಟೆಗೆ ವೃದ್ಧೆ ಶೌಚಾಲಯದಿಂದ ಹೊರಗೆ ಬಂದಾಗ ಹಿಂಬದಿಯಿಂದ ಬಂದ ಯುವಕನೊಬ್ಬ ವೃದ್ಧೆಯ ಕೈಗಳನ್ನು ಹಿಡಿದುಕೊಂಡಿದ್ದಾನೆ. ವೃದ್ಧೆಯ ಬಾಯಿ ಮುಚ್ಚಿ ಹಲ್ಲೆ ಮಾಡಿದ್ದಾನೆ. ಪ್ರತಿರೋಧ ವ್ಯಕ್ತಪಡಿಸಿ ಯುವಕನ ಕೈಗೆ ಕಚ್ಚಿದಾಗ, ಕೆರಳಿದ ಆತ ವೃದ್ಧೆಯ ಮುಖಕ್ಕೆ ಗುದ್ದಿದ್ದಾನೆ ಎಂದು ಆರೋಪಿಸಲಾಗಿದೆ.

ಘಟನೆಯಲ್ಲಿ ವೃದ್ಧೆಯ ಎರಡು ಹಲ್ಲುಗಳು ಮುರಿದಿವೆ, ಬಾಯಿ ಮತ್ತು ಮೂಗಿನಿಂದ ತೀವ್ರ ರಕ್ತಸ್ರಾವವಾಗಿದೆ. ಆತ ವೃದ್ಧೆಯ ಕುತ್ತಿಗೆ ಹಿಸುಕಿ ಸಾಯಿಸಲು ಯತ್ನಿಸಿದ್ದಾನೆ. ಈ ವೇಳೆ ವೃದ್ಧೆ ಜೋರಾಗಿ ಕೂಗಿದಾಗ ಅಕ್ಕಪಕ್ಕದ ಮನೆಯವರು ಧಾವಿಸಿದ್ದಾರೆ. ಅಷ್ಟರಲ್ಲಿ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸಿಬ್ಬಂದಿಯನ್ನು ಅಡ್ಡಗಟ್ಟಿ ದೊಣ್ಣೆಯಿಂದ ದಾಳಿ
LATEST NEWS
- ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

- ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

- ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

- ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

- ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

About The Editor
ನಿತಿನ್ ಆರ್.ಕೈದೊಟ್ಲು














