ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 9 ಅಕ್ಟೋಬರ್ 2019
ಜಂಬೂ ಸವಾರಿ ಆರಂಭಕ್ಕು ಮುನ್ನ ಆನೆ ತುಳಿದು ಕಲಾವಿದರೊಬ್ಬರ ಕಾಲಿನ ಮೂಳೆ ಮುರಿದಿದೆ. ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮಂಗಳವಾದ್ಯ ನುಡಿಸಲು ಭದ್ರಾವತಿಯಿಂದ ಆಗಮಿಸಿದ್ದ ತಂಡದಲ್ಲಿದ್ದ ಸತೀಶ್ ಎಂಬುವವರ ಕಾಲನ್ನು ಆನೆಯೊಂದು ತುಳಿದಿದೆ. ಸಾಗರ್ ಆನೆ ಮೇಲೆ ಅಂಬಾರಿಯನ್ನು ಇರಿಸುವ ಹೊತ್ತಿಗೆ ಎರಡು ಹೆಣ್ಣಾನೆಗಳನ್ನು ಸಾಗರ್ ಆನೆಯ ಅಕ್ಕಪಕ್ಕದಲ್ಲಿ ನಿಲ್ಲಿಸಿಕೊಳ್ಳಲಾಯಿತು. ಈ ವೇಳೆ ಹೆಣ್ಣಾನೆಗಳ ತಿರುಗುವ ರಭಸದಲ್ಲಿ ಕಲಾವಿದನ ಕಾಲು ತುಳಿದಿವೆ.
ಆನೆ ತುಳಿತದ ನೋವಿನಿಂದ ಕುಸಿದು ಕುಳಿತ ಕಲಾವಿದ ಸತೀಶ್ ಅವರಿಗೆ ಸ್ಥಳೀಯರು ಸಂತೈಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳು ಸತೀಶ್ ಅವರ ಸ್ಥಿತಿ ಕುರಿತು ಪಾಲಿಕೆ ಉಪಮೇಯರ್ ಚನ್ನಬಸಪ್ಪ ಮತ್ತು ವಿಪಕ್ಷ ನಾಯಕ ರಮೇಶ್ ಹೆಗ್ಡೆ ಅವರ ಗಮನಕ್ಕೆ ತಂದರು. ಕೂಡಲೆ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಯಿತು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
LATEST NEWS
- ಗಾಂಧಿ ಬಜಾರ್ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್, ಏನಿದು ಕೇಸ್?

- ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

- ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್

- ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

- ರಾತ್ರಿ 11:45ಕ್ಕೆ ಅಮೀರ್ ಅಹಮದ್ ಸರ್ಕಲ್ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು















