ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸೊರಬ: ಪಟ್ಟಣದ ಮೀನು ಮಾರುಕಟ್ಟೆ (fish market) ಗೇಟ್ ಬಳಿ ಕಾರು ಅಡ್ಡಲಾಗಿ ನಿಲ್ಲಿಸಿದ್ದನ್ನು ಪ್ರಶ್ನಿಸಿದ ವ್ಯಕ್ತಿಯ ಮೇಲೆ ಮೂವರು ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಚಿಮನೂರು ಗ್ರಾಮದ ವಸಂತ್ ಹೆಚ್.ಸಿ. ಎಂಬುವವರು ಹಲ್ಲೆಗೊಳಗಾಗಿದ್ದಾರೆ.
ಇದನ್ನೂ ಓದಿ – ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ
ವಸಂತ್ ಅವರು ತಮ್ಮ ಕಾರಿನಲ್ಲಿ ಮೀನು ಮಾರುಕಟ್ಟೆಗೆ ಹೋಗಿದ್ದಾಗ, ಸ್ವಿಫ್ಟ್ ಕಾರೊಂದು ರಸ್ತೆಗೆ ಅಡ್ಡಲಾಗಿ ನಿಂತಿತ್ತು. ತಮ್ಮ ಕಾರು ಹೋಗಲು ದಾರಿ ಮಾಡಿಕೊಡುವಂತೆ ಕೇಳಿದಾಗ, ಸ್ವಿಫ್ಟ್ ಕಾರಿನಲ್ಲಿದ್ದ ವ್ಯಕ್ತಿಯೊಬ್ಬ ಕಾರಿನ ಬೀಗದಿಂದ ವಸಂತ್ ಅವರ ಮುಖಕ್ಕೆ ಹೊಡೆದು ಗಾಯಗೊಳಿಸಿದ್ದಾನೆ. ಕಾರಿನಲ್ಲಿದ್ದ ಮತ್ತಿಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿ, ವಸಂತ್ ಅವರ ಅಂಗಿ ಹರಿದು ನೆಲಕ್ಕೆ ಬೀಳಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LATEST NEWS
- ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

- ಉಪನ್ಯಾಸಕ ಸುರೇಶ್ ನಿಗೂಢ ಸಾವು ಕೇಸ್, ಶಿವಮೊಗ್ಗ SP ಫಸ್ಟ್ ರಿಯಾಕ್ಷನ್, ಏನಂದ್ರು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

- ಟಾಟಾ ಏಸ್, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

- ಮೀನು ಮಾರುಕಟ್ಟೆ ಬಳಿ ಕಿರಿಕ್, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು















