ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಭದ್ರಾವತಿ: ತಾಲೂಕಿನ ಹುಣಸೆಕಟ್ಟೆ ಜಂಕ್ಷನ್ ಗ್ರಾಮದ ಬಳಿ ಭಾನುವಾರ ರಾತ್ರಿ ಮೆಕ್ಕೆಜೋಳ ತುಂಬಿದ್ದ ಲಾರಿಯ ಹಿಂಬದಿಯ ಚಕ್ರದಡಿ ಸಿಲುಕಿ ದಂಪತಿ (couple) ಮೃತಪಟ್ಟಿದ್ದಾರೆ.
ಇದನ್ನೂ ಓದಿ : ಆಯನೂರಿನಲ್ಲಿ ಬೈಕ್ ಕಳ್ಳತನ, ಹೇಗಾಯ್ತು ಘಟನೆ?
ಮೃತರನ್ನು ತರೀಕೆರೆ ತಾಲೂಕು ಹರವನಹಳ್ಳಿ ಗೌಳಿಗರ ಕ್ಯಾಂಪ್ ನಿವಾಸಿ ಬಾಬು (32) ಹಾಗೂ ಅವರ ಪತ್ನಿ ಸಾವಿತ್ರಿ (29) ಎಂದು ಗುರುತಿಸಲಾಗಿದೆ. ದಂಪತಿ ಶಿವಮೊಗ್ಗದ ಫುಡ್ಕೋರ್ಟ್ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದರು. ಶಿವಮೊಗ್ಗದಲ್ಲೇ ನೆಲೆಸಿದ್ದ ಅವರು, ವಾರಕ್ಕೊಮ್ಮೆ ಸ್ವಗ್ರಾಮಕ್ಕೆ ಹೋಗುತ್ತಿದ್ದರು.

ಭಾನುವಾರ ರಾತ್ರಿ ಕೆಲಸ ಮುಗಿಸಿ ಬೈಕ್ನಲ್ಲಿ ತೆರಳುವಾಗ ಅಪಘಾತ ನಡೆದಿದೆ. ಶಿವಮೊಗ್ಗದಿಂದ ತರೀಕೆರೆ ಕಡೆ ತೆರಳುತ್ತಿದ್ದ ಲಾರಿಯ ಹಿಂಬದಿಯ ಚಕ್ರದಡಿ ಬೈಕ್ ಸಿಲುಕಿದೆ. ಬಾಬು ಸ್ಥಳದಲ್ಲೇ ಮೃತಪಟ್ಟರೆ, ಸಾವಿತ್ರಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯ ಕೊನೆಯುಸಿರೆಳೆದಿದ್ದಾರೆ. ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LATEST NEWS
- ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಗೆ ಪ್ರಶಸ್ತಿ

- ಹಾಸ್ಟೆಲ್ನಲ್ಲಿ ಸಾಲು ಸಾಲು ಸಮಸ್ಯೆ, ಶಿವಮೊಗ್ಗ ಡಿ.ಸಿ.ಗೆ ದೂರು ನೀಡಿದ ವಿದ್ಯಾರ್ಥಿಗಳು

- 6 ರಿಂದ 16 ವರ್ಷದ ಮಕ್ಕಳಿಗೆ ರಂತ ತರಬೇತಿ ಶಿಬಿರ, ಎಲ್ಲಿ? ಏನೇನು ಕಲಿಸಲಾಗುತ್ತದೆ?

- ₹50 ಪೆಟ್ರೋಲ್ ಹಾಕಿಸಿಕೊಂಡು ಹಣ ಕೇಳಿದ್ದಕ್ಕೆ ಬಂಕ್ ಮಾಲೀಕ, ಸಿಬ್ಬಂದಿ ಮೇಲೆ ಅಟ್ಯಾಕ್

- ವರದಹಳ್ಳಿಯಲ್ಲಿ ಶ್ರೀಧರ ಸ್ವಾಮೀಜಿ ಆರಾಧನಾ ಮಹೋತ್ಸವ, ಏನೇನು ಕಾರ್ಯಕ್ರಮ ಇರಲಿದೆ?

About The Editor
ನಿತಿನ್ ಆರ್.ಕೈದೊಟ್ಲು














