ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಗಾಜನೂರು ರಸ್ತೆಯ ಹೊಸಹಳ್ಳಿ ಸಮೀಪ ಅಪರಿಚಿತ ವಾಹನ ಡಿಕ್ಕಿ ಹೊಡೆದು (hit-and-run) ಬೈಕ್ ಸವಾರರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಗಾಜನೂರು ನಿವಾಸಿ ಲಕ್ಷ್ಮಣ ಎಂಬುವವರು ಗಾಯಗೊಂಡಿದ್ದಾರೆ.
ಇದನ್ನೂ ಓದಿ : ಕಾರಿನಲ್ಲಿ ದಿಢೀರ್ ಬೆಂಕಿ, ಕೆಲವೇ ಕ್ಷಣದಲ್ಲಿ ಮುಂಭಾಗ ಆಹುತಿ
ಲಕ್ಷ್ಮಣ ಅವರು ಸಂಜೆ ವೇಳೆಗೆ ಬೈಕಿನಲ್ಲಿ ಹೊಸಹಳ್ಳಿಯಿಂದ ಗಾಜನೂರು ಕಡೆಗೆ ತೆರಳುತ್ತಿದ್ದರು. ಗಾಜನೂರು ಕಡೆಯಿಂದ ವೇಗವಾಗಿ ಬಂದ ವಾಹನವೊಂದು ಲಕ್ಷ್ಮಣ ಅವರ ಬೈಕ್ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಲಕ್ಷ್ಮಣ ಅವರ ತಲೆ ಹಾಗೂ ಕೈಕಾಲುಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಕೂಡಲೇ ಸ್ಥಳೀಯರು ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು.

ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಗೆ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LATEST NEWS
- ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್, ದಾಖಲಾಯ್ತು ಕೇಸ್

- ಗುಡ್ಡೇಕಲ್ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

- ಭದ್ರಾವತಿಯ ಭದ್ರಾ ನದಿಗೆ ರಾಶಿ ರಾಶಿ ತ್ಯಾಜ್ಯ, ವೈಜ್ಞಾನಿಕ ಕ್ರಮಕ್ಕೆ ಒತ್ತಾಯ

- ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

- ಶಿವಮೊಗ್ಗ ಜಿಲ್ಲೆಯ ಮನೆ ಮನೆಗೂ ಭೇಟಿ ನೀಡ್ತಾರೆ ಗಣತಿದಾರರು, ಏನೇನು ಮಾಹಿತಿ ಕೊಡಬೇಕು?

About The Editor
ನಿತಿನ್ ಆರ್.ಕೈದೊಟ್ಲು














