ನಗರಸಭೆ ಸಿಬ್ಬಂದಿ ಎಂದು ನಂಬಿಸಿ ₹11.62 ಲಕ್ಷದ ಚಿನ್ನಾಭರಣ ಕಳವು, ಹೇಗಾಯ್ತು ಘಟನೆ?

ಸಾಗರ: ‘ನಗರಸಭೆಯಿಂದ ಬಂದಿದ್ದೇವೆʼ ಎಂದು ನಂಬಿಸಿ ದಂಪತಿಯ ಗಮನ ಬೇರೆಡೆ ಸೆಳೆದು ಮನೆಯಲ್ಲಿದ್ದ ಸುಮಾರು ₹11.62 ಲಕ್ಷ ಮೌಲ್ಯದ ಚಿನ್ನಾಭರಣ (ornaments) ಕಳವು ಮಾಡಲಾಗಿದೆ. ಸಾಗರದ ಶ್ರೀಧರ ನಗರದಲ್ಲಿ ಘಟನೆ ನಡೆದಿದೆ.➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
Sagara Town Police Station 1

ಸಾಗರದ ಪ್ರಭಾಕರ ಎಂ.ಹೆಗಡೆ ಎಂಬುವವರು ಈ ಸಂಬಂಧ ದೂರು ನೀಡಿದ್ದಾರೆ. ಪ್ರಭಾಕರ್‌ ಅವರ ಮನೆಗೆ ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತರು, ಮನೆಯ ನೀರಿನ ಸಮಸ್ಯೆ ಸರಿಪಡಿಸಲು ನಗರಸಭೆಯಿಂದ ಬಂದಿರುವುದಾಗಿ ಹೇಳಿಕೊಂಡಿದ್ದರು. ಇವರ ಮಾತನ್ನು ನಂಬಿದ ಪ್ರಭಾಕರ ಅವರು ಒಬ್ಬ ವ್ಯಕ್ತಿಯನ್ನು ಟೆರೇಸ್‌ ಮೇಲೆ ಕರೆದೊಯ್ದಿದ್ದರು. ಇದೇ ವೇಳೆ ಕೆಳಗಿದ್ದ ಮತ್ತೊಬ್ಬ ವ್ಯಕ್ತಿ ಪ್ರಭಾಕರ ಅವರ ಪತ್ನಿಯನ್ನು ಟೆರೇಸ್‌ಗೆ ಕರೆಸಿಕೊಂಡಿದ್ದಾನೆ. ನಂತರ ಅವರು ಕೆಲಸ ಮುಗಿದಿದೆ ಎಂದು ಹೇಳಿ ಅಲ್ಲಿಂದ ನಿರ್ಗಮಿಸಿದ್ದಾರೆ.

Sagara Police Station Building

ಇದನ್ನೂ ಓದಿ : ಸಾಗರ ಮಾರಿಕಾಂಬಾ ದೇವಿ ಮೆರವಣಿಗೆ ನೋಡಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಆಘಾತ

ಅಪರಿಚಿತರು ಹೋದ ನಂತರ ಅನುಮಾನಗೊಂಡು ಪರಿಶೀಲಿಸಿದಾಗ, ಸುಮಾರು 216 ಗ್ರಾಂ ತೂಕದ ವಿವಿಧ ಚಿನ್ನಾಭರಣ ಹಾಗೂ ಬೆಳ್ಳಿ ಲೋಟ ಕಳುವಾಗಿರುವುದು ಗೊತ್ತಾಗಿದೆ. ಕಳುವಾದ ವಸ್ತುಗಳಲ್ಲಿ 45 ಗ್ರಾಂನ ಕರಿಮಣಿ ಸರ, 30 ಗ್ರಾಂನ ಕಂಠಿ ಸರ ಹಾಗೂ ಬಂಗಾರದ ಬಳೆಗಳು ಸೇರಿವೆ. ಸಾಗರ ನಗರ ಪೊಲೀಸರು ಪ್ರಕರಣ ದಾಖಲಾಗಿದ್ದು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಸರ್ಕಾರಿ ಅಧಿಕಾರಿಗೆ ಜೈಲು ಶಿಕ್ಷೆ, ಏನಿದು ಪ್ರಕರಣ?

Leave a Comment