ರಿಪ್ಪನ್ಪೇಟೆ:ಹೊಸನಗರ ಕ್ಷೇತ್ರ ಮರು ರಚನೆಗೆ ಒತ್ತಾಯಿಸಿ ತಾಲೂಕಿನ ನಗರದಿಂದ ಹಮ್ಮಿಕೊಂಡಿದ್ದ ಪಾದಯಾತ್ರೆ (movement) ರಿಪ್ಪನ್ಪೇಟೆ ತಲುಪಿತು. ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಸಮಾರೋಪ ಸಮಾರಂಭ ನಡೆಯಿತು.
ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಸಂಸದ ಬಿ.ವೈ.ರಾಘವೇಂದ್ರ ಸೇರಿ ಹಲವರು ಭಾಗವಹಿಸಿದ್ದರು.
ಯಾರೆಲ್ಲ ಏನೆಲ್ಲ ಹೇಳಿದರು?
ಕಡ್ಡಾಯವಾಗಿ ಹೊಸನಗರ ಕ್ಷೇತ್ರ ಆಗಲೇಬೇಕು. ನಿಮ್ಮ ಆಗ್ರಹಕ್ಕೆ ನಮ್ಮ ಬೆಂಬಲ ಇದ್ದೇ ಇರುತ್ತದೆ. ರಾಜ್ಯದಿಂದ ಆಗಬೇಕಾದ ಎಲ್ಲ ಸಹಕಾರ ನೀಡಲು ನಾವು ಬದ್ಧರಿದ್ದೇವೆ. ಕ್ಷೇತ್ರ ವಿಂಗಡಣೆ ಕಾರ್ಯ ಕೇಂದ್ರ ಸರ್ಕಾರದ್ದು. ಹಾಗಾಗಿ ಸಂಸದರಾದ ಬಿ.ವೈ.ರಾಘವೇಂದ್ರ ಅವರು ಈ ಬಗ್ಗೆ ಆಸಕ್ತಿ ತೋರಬೇಕು.ಎಸ್. ಮಧು ಬಂಗಾರಪ್ಪ, ಜಿಲ್ಲಾ ಉಸ್ತುವಾರಿ ಸಚಿವ
ರಾಜ್ಯ ಮತ್ತು ಕೇಂದ್ರ ಸರ್ಕಾರ ಜಂಟಿಯಾಗಿ ಕಾನೂನಿಗೆ ಒಳಪಟ್ಟು ಕೇತ್ರ ಮರು ಸ್ಥಾಪನೆಗಾಗಿ ಶ್ರಮಿಸೋಣ. ಈ ಭಾಗದ ಜನ ಮುಳುಗಡೆಯಿಂದ ನಲುಗಿದ್ದಾರೆ. ಈ ಪ್ರದೇಶದ ಸಮಗ್ರ ಅಭಿವೃದ್ಧಿಯೊಂದಿಗೆ ಕ್ಷೇತ್ರ ಮರು ರಚನೆ ಮಾಡಲು ಹೋರಡೋಣ.ಬಿ.ವೈ.ರಾಘವೇಂದ್ರ, ಸಂಸದ
ಕ್ಷೇತ್ರ ಮರು ರಚನೆ ಹೋರಾಟದಲ್ಲಿ ಮೂಲೆಗದ್ದೆ ಶ್ರೀಗಳು ಮತ್ತು ಮಾಜಿ ಶಾಸಕ ಸ್ವಾಮಿರಾವ್ ಅವರ ಅವಿರತ ಶ್ರಮದಿಂದ ಈ ಪಾದಯಾತ್ರೆ ಯಶಸ್ವಿಯಾಗಿದೆ. ದೇಶದ ವಿವಿಧಡೆ 25 ಸಾವಿರ ಜನಸಂಖ್ಯೆಗೆ ವಿಧಾನಸಭೆ ಕ್ಷೇತ್ರಗಳಿವೆ. ಹಾಗಾಗಿ ಪ್ರತ್ಯೇಕ ಕ್ಷೇತ್ರ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ.ಗೋಪಾಲಕೃಷ್ಣ ಬೇಳೂರು, ಶಾಸಕ
ಮೂಲೆಗದ್ದೆ ಮಠದ ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ, ಹೊಂಬುಜ ಜೈನ ಮಠದ ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ, ನಿಟ್ಟೂರು ನಾರಾಯಣಗುರು ಮಠದ ಶ್ರೀ ರೇಣುಕಾನಂದ ಸ್ವಾಮೀಜಿ, ಮುಸ್ಲಿಂ ಧರ್ಮಗುರು ಮುನೀರ್ ಸಾಖಾಫಿ, ಶಾಸಕ ಆರಗ ಜ್ಞಾನೇಂದ್ರ, ಎಂಎಡಿಬಿ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ, ಮಾಜಿ ಸಚಿವ ಹರತಾಳು ಹಾಲಪ್ಪ, ಮಾಜಿ ಶಾಸಕ ಬಿ.ಸ್ವಾಮಿ ರಾವ್, ಕಲಗೋಡು ರತ್ನಾಕರ್, ದೇವಾನಂದ, ಅಲುವಳ್ಳಿ ವೀರೇಶ್, ವರ್ತೇಶ್, ಸುರೇಶ್ ಸ್ವಾಮಿರಾವ್, ಮಾಸ್ತಿಕಟ್ಟೆ ಸುಬ್ರಮಣ್ಯ ಇತರರಿದ್ದರು.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ