ಆರಂಭದಲ್ಲಿ ನಂಬಿಕೆ ಮೂಡಿಸಿದರು, ಕೊನೆಗೆ ಸತಾಯಿಸಿದರು, ಶಿವಮೊಗ್ಗದಲ್ಲಿ ದಾಖಲಾಯ್ತು ಪ್ರಕರಣ

Published On : ಏಪ್ರಿಲ್ 16, 2026

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗ: ಹೆಲ್ತ್ ಕೇರ್‌ ಕಂಪನಿಯಲ್ಲಿ ಹಣ ಹೂಡಿಕೆ (investment) ಮಾಡಿಸಿಕೊಂಡು ಶಿವಮೊಗ್ಗದ ವ್ಯಕ್ತಿಯೊಬ್ಬರಿಗೆ ವಂಚಿಸಿಲಾಗಿದೆ.

ಶಿವಮೊಗ್ಗದ ತಾರಕೇಶ್ವರ ಎಂಬುವವರಿಗೆ ಕಂಪನಿಯಲ್ಲಿ ಹಣ ಹೂಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ತಿಳಿಸಲಾಗಿತ್ತು. ಇದನ್ನು ನಂಬಿದ ತಾರಕೇಶ್ವರ ಅವರು ಹಂತ ಹಂತವಾಗಿ ಸುಮಾರು ₹2.10 ಲಕ್ಷ ಹೂಡಿಕೆ ಮಾಡಿದ್ದರು. ಆರಂಭದಲ್ಲಿ ಸ್ವಲ್ಪ ಹಣವನ್ನು ವಾಪಸ್ ನೀಡಿ ನಂಬಿಕೆ ಹುಟ್ಟಿಸಿದ್ದ ಸಂಸ್ಥೆ, ನಂತರ ಹಣ ನೀಡದೆ ವಂಚಿಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

140823-Jayanagara-Police-Station

ತಾರಕೇಶ್ವರ ತಮ್ಮ ಹಣ ವಾಪಸ್ ಕೇಳಿದಾಗ ಸಂಸ್ಥೆಯವರು ಸರಿಯಾಗಿ ಸ್ಪಂದಿಸದೆ ಸತಾಯಿಸುತ್ತಿದ್ದರು. ಇದೇ ರೀತಿ ಶಿವಮೊಗ್ಗದ ಇನ್ನೂ ಹಲವಾರಿಂದ ಹಣ ಹೂಡಿಕೆ ಮಾಡಿಸಿಕೊಂಡು ಮೋಸ ಮಾಡಿರುವ ಶಂಕೆ ಇದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಘಟನೆ ಸಂಬಂಧ ಮೂವರ ವಿರುದ್ಧ ಜಯನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಶಿವಮೊಗ್ಗದ ಸೆಂಟ್ರಲ್‌ ಜೈಲಿಗೆ ಚೌ ಚೌ ತಂದವನೆ ಜೈಲುಪಾಲು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಏಪ್ರಿಲ್ 16, 2026

Leave a Comment