ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 11 ಅಕ್ಟೋಬರ್ 2019
ಅರಣ್ಯ ಇಲಾಖೆ ರೇಂಜ್ ಆಫೀಸರ್ ಒಬ್ಬರಿಗೆ ಬಿಜೆಪಿ ಯುವ ಮೋರ್ಚಾ ಮುಖಂಡ ಎಂದು ಪರಿಚಿಯಸಿಕೊಂಡ ವ್ಯಕ್ತಿಯೊಬ್ಬರು ಅವಾಚ್ಯವಾಗಿ ನಿಂದಿಸಿರುವ ಆಡಿಯೋ ವೈರಲ್ ಆಗಿದೆ. ಸಸ್ಪೆಂಡ್ ಆಗುವುದು ಗ್ಯಾರೆಂಟಿ, ಮನೆಗೆ ನುಗ್ಗುತ್ತೇವೆ ಎಂದು ಬೆದರಿಕೆ ಹಾಕಿರುವುದು ಆಡಿಯೋದಲ್ಲಿದೆ. ಇದು ಪರಿಸರವಾದಿಗಳು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳನ್ನು ಕೆರಳಿಸಿದೆ.
ಗಾಜನೂರಿನ ಗಣಪತಿ ದೇವಸ್ಥಾನದ ಮುಂದೆ ಇದ್ದ ಮಾವಿನ ಮರವನ್ನು ತುಂಗಾ ಮೇಲ್ದಂಡೆ ಯೋಜನೆ ಅಧಿಕಾರಿಗಳು ಕಡಿಸಿದ್ದರು. ಹಾಗಾಗಿ ಯೋಜನೆಯ ಎಇಇ ಕುಮಾರಸ್ವಾಮಿ ಅವರ ವಿರುದ್ಧ ಅರಣ್ಯ ಇಲಾಖೆ ಪ್ರಕರಣ ದಾಖಲು ಮಾಡಿತ್ತು.
ಈ ವಿಚಾರವಾಗಿ ಶಿವಮೊಗ್ಗದ ಶಂಕರ ಅರಣ್ಯ ವಲಯ ಆಫೀಸರ್ ಜಯೇಶ್ ಅವರಿಗೆ ಕರೆ ಮಾಡಿದ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗಿರಿರಾಜ್, ಬೆದರಿಕೆ ಹಾಕಿದ್ದಾರೆ. ಇದರ ಆಡಿಯೊ ವೈರಲ್ ಆಗಿದೆ.
ಆಡಿಯೋದಲ್ಲಿ ಏನಿದೆ? ಏನೆಲ್ಲ ಬೆದರಿಕೆ ಹಾಕಲಾಗಿದೆ?
ಪರಿಸರವಾದಿಗಳಿಂದ ತೀವ್ರ ಆಕ್ರೋಶ
ಇನ್ನು, ಬಿಜೆಪಿ ಮುಖಂಡ ಗಿರಿರಾಜ್ ಬೆದರಿಕೆಗೆ ಅರಣ್ಯ ಇಲಾಖೆ ಅಧಿಕಾರಿಗಳು, ಪರಿಸರವಾದಿಗಳನ್ನು ಕೆರಳಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್’ಗಳನ್ನು ಪ್ರಕಟಿಸಿ ಕ್ರಮಕ್ಕೆ ಆಗ್ರಹಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200