ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 19 ಅಕ್ಟೋಬರ್ 2019

ಹೆಲ್ಮೆಟ್ ಹಾಕದ ದ್ವಿಚಕ್ರ ವಾಹನ ಸವಾರನಿಗೆ ಸಂಚಾರಿ ಠಾಣೆ ಪೊಲೀಸ್ ಸಿಬ್ಬಂದಿಯೊಬ್ಬರು ನಿಂದಿಸಿದ್ದಾರೆ ಎಂದು ಆರೋಪಿಸಿ ತುಂಗಾ ನದಿ ಹಳೆ ಸೇತೆವೆ ಬಳಿ ಸಾರ್ವಜನಿಕರು ದಿಢೀರ್ ರಸ್ತೆ ತಡೆ ನಡೆಸಿದರು.
ಶಿವಮೊಗ್ಗ ನಗರದಾದ್ಯಂತ ಹೆಲ್ಮೆಟ್ ಇಲ್ಲದೆ ದ್ವಿಚಕ್ರ ವಾಹನ ಚಲಾಯಿಸುತ್ತಿರುವವರ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇವತ್ತು ಬೆಳಗ್ಗೆ ತುಂಗಾ ನದಿ ಹಳೆ ಸೇತುವೆ ಬಳಿ ಹೆಲ್ಮೆಟ್ ಇಲ್ಲದೆ ವಾಹನ ಚಲಾಯಿಸುತ್ತಿದ್ದ ವ್ಯಕ್ತಿಯೊಬ್ಬರನ್ನು ಸಂಚಾರಿ ಠಾಣೆ ಪೊಲೀಸ್ ಸಿಬ್ಬಂದಿ ಹಿಡಿದು, ದಂಡ ಕಟ್ಟುವಂತೆ ತಿಳಿಸಿದ್ದಾರೆ.
ಪೊಲೀಸ್ ಸಿಬ್ಬಂದಿ, ದ್ವಿಚಕ್ರ ವಾಹನ ಸವಾರನಿಗೆ ನಿಂದಿಸಿದ್ದಾರೆ ಎಂದು ಆರೋಪಿಸಿ ಇಬ್ಬರ ನಡುವೆ ಮಾತಿಗೆ ಮಾತು ಬೆಳೆಯಿತು. ಈ ವೇಳೆ ಸಾರ್ವಜನಿಕರ ಜಮಾವಣೆಯಾಯಿತು. ಪೊಲೀಸರು ನಿಂದಿಸಿದ್ದನ್ನು ಖಂಡಿಸಿ ದ್ವಿಚಕ್ರ ವಾಹನ ಸವಾರ ಮತ್ತು ಕೆಲವು ಸಾರ್ವಜನಿಕರು ದಿಢೀರ್ ರಸ್ತೆ ತಡೆ ಮಾಡಿದರು. ಇದರಿಂದ ಬಿ.ಹೆಚ್.ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರದಲ್ಲಿ ವ್ಯತ್ಯಯವಾಯಿತು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು















