ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 31 ಅಕ್ಟೋಬರ್ 2019
ರಾಷ್ಟ್ರೀಯ ಏಕತೆ ದಿನಾಚರಣೆ ಅಂಗವಾಗಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಇವತ್ತು ಮ್ಯಾರಥಾನ್ ಆಯೋಜಿಸಲಾಗಿತ್ತು. ಜಿಲ್ಲಾ ರಕ್ಷಣಾಧಿಕಾರಿ ಶಾಂತರಾಜು ಅವರು ನೆಹರು ಸ್ಟೇಡಿಯಂನಲ್ಲಿ ಮ್ಯಾರಥಾನ್’ಗೆ ಚಾಲನೆ ನೀಡಿದರು.

ಪೊಲೀಸರು, ಕ್ರೀಡಾಪಟುಗಳು, ಸಾರ್ವಜನಿಕರು ಮ್ಯಾರಥಾನ್’ನಲ್ಲಿ ಭಾಗವಹಿಸಿದ್ದರು. ನೆಹರು ಸ್ಟೇಡಿಯಂನಿಂದ ಕುವೆಂಪು ರಸ್ತೆ, ಜೈಲ್ ಸರ್ಕಲ್, ದುರ್ಗಿಗುಡಿ, ಗೋಪಿ ಸರ್ಕಲ್, ನೆಹರು ರೋಡ್, ಅಮೀರ್ ಅಹಮದ್ ರಸ್ತೆ, ಬಿ.ಹೆಚ್.ರಸ್ತೆ, ವೀರಭದ್ರೇಶ್ವರ ಟಾಕೀಸ್ ರಸ್ತೆ, ಡಿವಿಎಸ್ ಸರ್ಕಲ್, ಮಹಾವೀರ ಸರ್ಕಲ್ ಮೂಲಕ ನೆಹರು ಕ್ರೀಡಾಂಗಣದವರೆಗೆ ಮ್ಯಾರಥಾನ್ ನಡೆಯಿತು.
ಹೆಚ್ಚುವರಿ ರಕ್ಷಣಾಧಿಕಾರಿ ಶೇಖರ್, KSRP 8ನೇ ಬೆಟಾಲಿಯನ್ ಅಸಿಸ್ಟೆಂಟ್ ಕಮಾಂಡೆಂಟ್ ಮಂಜುನಾಥ ಅಣಜಿ ಸೇರಿದಂತೆ ಹಲವರು ಮ್ಯಾರಥಾನ್’ನಲ್ಲಿ ಪಾಲ್ಗೊಂಡಿದ್ದರು.


ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





