ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 31 ಅಕ್ಟೋಬರ್ 2019
ಕಾಂಟ್ರಾಕ್ಟರ್ ಲೈಸೆನ್ಸ್ ನೀಡಲು ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದುರ್ಗಿಗುಡಿಯಲ್ಲಿ ಇಂದು ಸಂಜೆ ದಾಳಿ ನಡೆಸಿ, ಅಧಿಕಾರಿಯನ್ನು ಬಂಧಿಸಲಾಗಿದೆ.
ಲೋಕೋಪಯೋಗಿ ಇಲಾಖೆ ಕಚೇರಿ ವ್ಯವಸ್ಥಾಪಕ ಶೇಖ್ ಮೊಹಮ್ಮದ್ ರಫಿ, ಎಸಿಬಿ ಬಲೆಗೆ ಬಿದ್ದ ಅಧಿಕಾರಿ. ದಾವಣಗೆರೆಯ ಜಗಳೂರಿನ ವೈ.ಪಿ.ಸಿದ್ದನಗೌಡ ಅವರಿಗೆ ಕ್ಲಾಸ್ 3 ಕಾಂಟ್ರಾಕ್ಟರ್ ಲೈಸೆನ್ಸ್ ಮಾಡಿಕೊಡಲು ಶೇಖ್ ಮೊಹಮ್ಮದ್ ರಫಿ 10 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮೊದಲು ಐದು ಸಾವಿರ ರೂ. ಹಣವನ್ನು ಪಡೆದಿದ್ದರು. ಇವತ್ತು ಎರಡನೆ ಕಂತು 5 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಎಸಿಬಿ ಡಿವೈಎಸ್’ಪಿ ವೇಣುಗೋಪಾಲ್, ಇನ್ಸ್’ಪೆಕ್ಟರ್ ಜೆ.ಎಸ್.ತಿಪ್ಪೇಸ್ವಾಮಿ, ಎನ್.ವೀರೇಂದ್ರ, ವಸಂತ, ನಾಗರಾಜ, ರಘುನಾಯ್ಕ, ಸುರೇಂದ್ರ, ಯೋಗೇಶಪ್ಪ, ಹರೀಶ್, ಶ್ರೀನಿವಾಸ್ ಅವರು ದಾಳಿಯಲ್ಲಿ ಭಾಗವಹಿಸಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






