ಹವಾಮಾನ ವರದಿ: ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ತಾಪಮಾನ ತುಸು ತಗ್ಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿಯು ಬಿಸಿಲ ಝಳ ಕಡಿಮೆಯಾಗಿದೆ. ಇತ್ತ ಇವತ್ತು ಜಿಲ್ಲೆಯ ಹಲವಡೆ ಮಳೆಯಾಗುವ ಸಾಧ್ಯತೆ ಇದೆ.
ಬಿಸಿಲಿನ ಅಬ್ಬರ ಕಡಿಮೆ ಆಗಿರುವುದರಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಸೆಕೆಯ ಪ್ರಮಾಣ ಇಳಿಕೆಯಾಗಿದೆ. ಆದರೆ ಧಗೆ ಮುಂದುವರಿದಿದೆ. ಇತ್ತ ಶಿವಮೊಗ್ಗದಲ್ಲಿ ಇವತ್ತು ಮೋಡ ಕವಿದ ವಾತಾವರಣ ಮತ್ತು ಮಳೆಯಾಗುವ ಸಂಭವವಿರಲಿದೆ ಎಂದು ಆಕ್ಯೂ ವೆದರ್ ಅಂದಾಜಿಸಿದೆ.

ಬಿಸಿಲ ಝಳ ತಗ್ಗುತ್ತಾ? ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
- ಶಿವಮೊಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 36 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಮಧ್ಯಾಹ್ನದ ಬಳಿಕ ಗುಡುಗು ಸಹಿತ ಮಳೆಯಾಗುವ ಸಂಭವವಿದೆ.
- ತೀರ್ಥಹಳ್ಳಿಯಲ್ಲಿ ಇಂದು ಗರಿಷ್ಠ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಸಾದ್ಯತೆ ಇದೆ. ಮಧ್ಯಾಹ್ನದ ವೇಳೆಗೆ ಮಳೆಯ ನಿರೀಕ್ಷೆ ಇದೆ.
- ಸಾಗರ ತಾಲೂಕಿನಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಸಾದ್ಯತೆ ಇದೆ. ಮಧ್ಯಾಹ್ನದ ಹೊತ್ತಿಗೆ ಮಳೆಯ ನಿರೀಕ್ಷೆ ಇದೆ.
- ಹೊಸನಗರದಲ್ಲಿ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಮೋಡ, ಬಿಸಿಲು ಇರಲಿದೆ.
- ಸೊರಬ ತಾಲೂಕಿನಲ್ಲಿ ಇವತ್ತು ತಾಪಮಾನ ಹೆಚ್ಚಿರಲಿದೆ. ಗರಿಷ್ಠ 36 ಡಿಗ್ರಿ ಸಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಮಧ್ಯಾಹ್ನ ಮಳೆಯಾಗಬಹುದು.
- ಶಿಕಾರಿಪುರದಲ್ಲಿಯು ತಾಪಮಾನ ಹೆಚ್ಚಿರಲಿದೆ. ಇವತ್ತು ಗರಿಷ್ಠ 35 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ಇರಲಿದೆ. ಇಂದು ಮೋಡ ಕವಿದ ವಾತಾರವರಣ ಇರಲಿದ್ದು, ಅಲ್ಲಲ್ಲಿ ಚದುರಿದಂತೆ ಮಳೆಯಾಗಬಹುದು.
ಇದನ್ನೂ ಓದಿ : ಶಿವಮೊಗ್ಗದಲ್ಲಿ ಮಳೆಯಿಂದ ಹಾನಿ, ಬಿಜೆಪಿ ನಿಯೋಗದಿಂದ ಮನವಿ, ಏನಿದೆ?






