ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | THIRTHAHALLI | 7 ನವೆಂಬರ್ 2019
ತೀರ್ಥಹಳ್ಳಿ ತಾಲೂಕು ನೆರಳೂರು ಗ್ರಾಮಲೆಕ್ಕಿಗ ಯಶವಂತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದ ಗ್ರಾಮ ಸಹಾಯಕ ಅವಿನಾಶ್ ಅವರನ್ನು ಕೆಲಸದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಶಿವಮೊಗ್ಗ ತಾಲೂಕು ಗ್ರಾಮ ಲೆಕ್ಕಿಗರ ಸಂಘದ ಪ್ರಮುಖರು ಅಪರ ಜಿಲ್ಲಾಧಿಕಾರಿ ಜಿ.ಅನುರಾಧಾ ಅವರಿಗೆ ಮನವಿ ಸಲ್ಲಿಸಿದರು.
ಗ್ರಾಮಲೆಕ್ಕಿಗ ಯಶವಂತ್ ಕಚೇರಿಯ ಕೆಲಸ ನಿರ್ವಹಿಸಲು ಗ್ರಾಮ ಸಹಾಯಕ ಅವಿನಾಶ್ಗೆ ಸೂಚಿಸಿದ್ದರು. ಇದೇ ಕಾರಣಕ್ಕೆ ಏಕಾಏಕಿ ಯಶವಂತ್ ಮೇಲೆ ಅವಿನಾಶ್ ಹಲ್ಲೆ ನಡೆಸಿದ್ದಾರೆ.
ಈ ಘಟನೆಗೆ ಕಾರಣರಾದ ಅವಿನಾಶ್ ವಿರುದ್ದ ಕ್ರಮ ಜರುಗಿಸುವಂತೆ ಆಗ್ರಹಿಸಿದರು. ಶಿವಮೊಗ್ಗ ತಾಲೂಕು ಗ್ರಾಮಲೆಕ್ಕಿಗರ ಸಂಘದ ಅಧ್ಯಕ್ಷ ಯೋಗೇಶ್ ನಾಯ್ಕ್, ಗೌರವಾಧ್ಯಕ್ಷ ಹರ್ಷವರ್ಧನ್, ಕಾರ್ಯದರ್ಶಿ ಹಾಲೇಶಪ್ಪ, ಉಪಾಧ್ಯಕ್ಷ ಬಸವರಾಜ್ ಇತರರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





