ಹಾವು ಕಚ್ಚಿ ಗರ್ಭಿಣಿ ಸಾವು, ದುರ್ಘಟನೆ ಆಗಿದ್ದೆಲ್ಲಿ?

ಸಾಗರ: ನಾಗರ ಹಾವು ಕಚ್ಚಿ (cobra bite) ಗರ್ಭಿಣಿಯೊಬ್ಬರು ಮೃತಪಟ್ಟಿದ್ದಾರೆ. ಸಾಗರ ತಾಲೂಕಿನ ಆನಂದಪುರ ಸಮೀಪದ ಸುಳುಗೋಡು ಗ್ರಾಮದಲ್ಲಿ ಇಂದು ಘಟನೆ ಸಂಭವಿಸಿದೆ.

ಸುಳುಗೋಡಿನ ವೀರಭದ್ರ ಅವರ ಪತ್ನಿ ಸ್ವಾತಿ (26) ಮೃತ ದುರ್ದೈವಿ. ಎರಡು ವರ್ಷಗಳ ಹಿಂದೆಯಷ್ಟೇ ಇವರ ವಿವಾಹವಾಗಿತ್ತು.

ಹೇಗಾಯ್ತು ಘಟನೆ?

ಸ್ವಾತಿ ಅವರು ತಮ್ಮ ಮನೆಯ ಹಿತ್ತಲಿನಲ್ಲಿದ್ದಾಗ ಹಾವು ಕಚ್ಚಿದೆ. ಕುಟುಂಬದವರು ತಕ್ಷಣವೇ ಅವರನ್ನು ಆನಂದಪುರದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದರು. ಆದರೆ ಮಾರ್ಗಮಧ್ಯೆಯೇ ಸ್ವಾತಿ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ KSIIDC ಅಧ್ಯಕ್ಷರ ಭೇಟಿ, ಎರಡು ಮಹತ್ವದ ಘೋಷಣೆ 

ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : May 2, 2026 at 9:09 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಮೇ 2, 2026

Leave a Comment