ಹೆದ್ದಾರಿಯ ಮಧ್ಯದಲ್ಲಿದ್ದ ಯಮರೂಪಿ ಗುಂಡಿ ಮುಚ್ಚಿದ ಜನ, ಆಡಳಿತದ ವಿರುದ್ಧ ಆಕ್ರೋಶ

ಶಿವಮೊಗ್ಗ: ಹೆದ್ದಾರಿಯಲ್ಲಿದ್ದ ಬೃಹತ್ ಗುಂಡಿಗಳನ್ನು (potholes) ಮುಚ್ಚಲು ಆಡಳಿತ ವ್ಯವಸ್ಥೆ ವಿಫಲವಾದ ಹಿನ್ನೆಲೆ ಸ್ಥಳೀಯರೇ ಸ್ವಯಂಪ್ರೇರಿತರಾಗಿ ಗುಂಡಿ ಮುಚ್ಚಿದ್ದಾರೆ. ಗಾಡಿಕೊಪ್ಪ ಸರ್ಕಲ್‌ನಲ್ಲಿ ಹೆದ್ದಾರಿಯಲ್ಲಿ ಬೃಹತ್‌ ಗುಂಡಿಯಾಗಿತ್ತು. ಇದರಿಂದ ಅಪಘಾತಗಳು ಸಂಭವಿಸಿದ್ದವು. ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಗುಂಡಿಯಿಂದಾಗಿ ನಿರಂತರ ಅಪಘಾತ

ಗಾಡಿಕೊಪ್ಪದಲ್ಲಿ ಹಾದು ಹೋಗಿರುವ ಬಿ.ಹೆಚ್‌.ರಸ್ತೆಯಲ್ಲಿ ಸರ್ಕಲ್‌ ಬಳಿ ರಸ್ತೆ ಹದಗೆಟ್ಟಿದೆ. ಬೃಹತ್ ಗುಂಡಿಯಿಂದಾಗಿ ಪ್ರತಿನಿತ್ಯ ವಾಹನ ಸವಾರರಿಗೆ ಸಂಕಷ್ಟ ಎದುರಾಗುತ್ತಿತ್ತು. ಈ ಗುಂಡಿಯಿಂದಾಗಿ ಹಲವು ದ್ವಿಚಕ್ರ ವಾಹನ ಸವಾರರು ಅಪಘಾತಕ್ಕೀಡಾಗಿದ್ದರು. ಈ ಹಿನ್ನೆಲೆ ಹಲವು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನ ಆಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

frustrated residents of Gadi Koppa fill massive potholes

050526 Gadikoppa Residents close a pot hole on BH Road in Shimoga

ಜೆಲ್ಲಿ, ಮಣ್ಣು, ಸಿಮೆಂಟ್‌ ತಂದ ಜನ

ಸಮೀಪದಲ್ಲಿ ನಿರ್ಮಾಣ ಹಂತದ ಮನೆಯಿಂದ ಸಿಮೆಂಟ್‌, ಜೆಲ್ಲಿ, ಮರಳು ತಂದು ಸ್ಥಳೀಯರೆ ಗುಂಡಿ ಮುಚ್ಚಿದ್ದಾರೆ. ಅಲ್ಲದೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಈ ಹೆದ್ದಾರಿಯಲ್ಲಿ ಇರುವ ಗುಂಡಿಗಳನ್ನು ಕೂಡಲೆ ಮುಚ್ಚಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಭದ್ರಾವತಿಯ ಆರು ಮಂದಿಗೆ 3 ವರ್ಷ ಜೈಲು, ₹2,30,000 ದಂಡ, ಏನಿದು ಕೇಸ್‌?

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion