ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ವೇತನದಾರರ ತುಟ್ಟಿಭತ್ಯೆಯನ್ನು (ಡಿಎ) ಶೇ 1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದಾಗಿ ನೌಕರರ ತುಟ್ಟಿಭತ್ಯೆಯು ಮೂಲ ವೇತನದ ಶೇ 14.25ರಿಂದ ಶೇ 15.75ಕ್ಕೆ ಏರಿಕೆಯಾದಂತಾಗಿದೆ.
ಈ ಪರಿಷ್ಕೃತ ದರವು ಜನವರಿ 1ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಗೆ ಬರಲಿದೆ ಎಂದು ಆರ್ಥಿಕ ಇಲಾಖೆ ತಿಳಿಸಿದೆ.

- ಸರ್ಕಾರದ ಈ ನಿರ್ಧಾರದಿಂದ ರಾಜ್ಯದ ಬೊಕ್ಕಸಕ್ಕೆ ಹೆಚ್ಚುವರಿ ಹೊರೆಯಾಗಲಿದ್ದರೂ, ಸುಮಾರು 5.35 ಲಕ್ಷ ಜನರಿಗೆ ನೇರ ಲಾಭ.
- ಅನುದಾನಿತ ಸಂಸ್ಥೆಗಳು ಹಾಗೂ ನಿಗಮ ಮಂಡಳಿಗಳ ಸುಮಾರು 3 ಲಕ್ಷ ನೌಕರರಿಗೂ ಇದು ಅನ್ವಯ.
- ಸುಮಾರು 4.50 ಲಕ್ಷ ಪಿಂಚಣಿದಾರರಿಗೆ ಆರ್ಥಿಕ ನೆರವು ಸಿಗಲಿದೆ.
ತುಟ್ಟಿಭತ್ಯೆ ಹೆಚ್ಚಳ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಧನ್ಯವಾದ ತಿಳಿಸಿದ್ದಾರೆ.
