ಕುಡುಗೋಲಿನಿಂದ ಹಲ್ಲೆ; ಅಣ್ಣನಿಂದಲೆ ತಮ್ಮನ ಕೊಲೆ, ಯಾಕೆ? ಎಲ್ಲಿ ಆಗಿದ್ದು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ಭದ್ರಾವತಿ: ತಾಲೂಕಿನ ದಾಸರಕಲ್ಲಹಳ್ಳಿ (Dasara Kallahalli) ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಕೊಲೆಯಲ್ಲಿ (Murder) ಅಂತ್ಯವಾಗಿದೆ. ಅಣ್ಣನೇ ತನ್ನ ಸ್ವಂತ ತಮ್ಮನ ಮೇಲೆ ಕುಡುಗೋಲಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾನೆ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

​ಸಂತೋಷ್ (40) ಕೊಲೆಯಾದ ವ್ಯಕ್ತಿ. ಆರೋಪಿ ರಾಮಪ್ಪ (40) ಎಂಬುವವರು ತಮ್ಮ ತಮ್ಮನ ಮೇಲೆ ಕುಡುಗೋಲಿನಿಂದ (Sickle) ದಾಳಿ ನಡೆಸಿದ್ದಾರೆ. ಇಂದು ಬೆಳಗ್ಗೆ ಮನೆ ಬಳಿ ಇಬ್ಬರ ನಡುವೆ ಸಣ್ಣ ವಿಷಯಕ್ಕೆ ಗಲಾಟೆ (Quarrel) ಆರಂಭವಾಗಿತ್ತು. ಮಾತಿಗೆ ಮಾತು ಬೆಳೆದು ಪರಸ್ಪರ ಬೈದಾಡಿಕೊಂಡಿದ್ದಾರೆ. ಈ ವೇಳೆ ಸಿಟ್ಟಿಗೆದ್ದ ರಾಮಪ್ಪ, ತಮ್ಮ ಸಂತೋಷ್ ಮೇಲೆ ಕುಡುಗೋಲಿನಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ​

Shivamogga-Police-Jeep

ತೀವ್ರವಾಗಿ ಗಾಯಗೊಂಡಿದ್ದ ಸಂತೋಷ್ ಅವರನ್ನು ಕುಟುಂಬಸ್ಥರು ತಕ್ಷಣವೇ ಹೊಳೆಹೊನ್ನೂರು (Holehonnuru) ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ (Medical Treatment) ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ (McGann Hospital) ಕರೆದೊಯ್ಯಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಸಂತೋಷ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸದ್ಯ ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ (Mortuary) ರವಾನಿಸಲಾಗಿದೆ. ಆರೋಪಿ ರಾಮಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೊಳೆಹೊನ್ನೂರು ಠಾಣೆಯಲ್ಲಿ ಪ್ರರಕಣ ದಾಖಲಾಗಿದೆ.