ಶಿರಾಳಕೊಪ್ಪ: ರಸ್ತೆ ಒತ್ತುವರಿ (Road encroachment) ಮಾಡಿಕೊಂಡಿದ್ದ ವ್ಯಾಪಾರಿಗಳನ್ನು ತೆರವು ಮಾಡುವಾಗ ಶಿರಾಳಕೊಪ್ಪ ಮುಖ್ಯ ರಸ್ತೆಯಲ್ಲಿ (Shiralakoppa Main Road) ಹೈಡ್ರಾಮಾ ನಡೆದಿದೆ. ವ್ಯಾಪಾರಿಯೊಬ್ಬ ಮಾವಿನ ಹಣ್ಣುಗಳನ್ನೆಲ್ಲ ರಸ್ತೆಗೆ ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿರಾಳಕೊಪ್ಪದಲ್ಲಿ ಆಗಿದ್ದೇನು?
ಶಿಕಾರಿಪುರ ತಾಲೂಕು ಶಿರಾಳಕೊಪ್ಪ ಪಟ್ಟಣದಲ್ಲಿ ಕೆಲವರು ಮುಖ್ಯರಸ್ತೆಯ ಮೇಲೆಯೇ ವ್ಯಾಪಾರ ನಡೆಸುತ್ತಿದ್ದರು. ರಸ್ತೆ ಬಿಟ್ಟು ವ್ಯಾಪಾರ ನಡೆಸುವಂತೆ ಪಟ್ಟಣ ಪಂಚಾಯಿತಿ ಅಧಿಕಾರಿಗಳು (Town Panchayat officials) ವ್ಯಾಪಾರಿಗಳಿಗೆ ಸೂಚಿಸಿದರು. ಇಂದು ತೆರವು ಕಾರ್ಯಾಚರಣೆ (Eviction drive) ನಡೆಸಿದರು. ಈ ವೇಳೆ ವ್ಯಾಪಾರಿಯೊಬ್ಬ ಪಟ್ಟಣ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಸ್ತೆಗೆ ಮಾವಿನ ಹಣ್ಣು ಸುರಿದರು
ವ್ಯಾಪಾರಿಯೊಬ್ಬರು ಬುಟ್ಟಿಗಳಲ್ಲಿದ್ದ ಮಾವಿನ ಹಣ್ಣುಗಳನ್ನು ರಸ್ತೆಗೆ ಸುರಿದಿದ್ದಾರೆ. ಅಲ್ಲದೆ ಪಟ್ಟಣ ಪಂಚಾಯಿತಿ ಅಧಿಕಾರಿಗಳ ಕ್ರಮಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ಪೌರಕಾರ್ಮಿಕರು (Civic workers) ಮಾವಿನ ಹಣ್ಣುಗಳನ್ನು ರಸ್ತೆಯಿಂದ ತೆರವುಗೊಳಿಸಿದರು. ಇದರಿಂದ ಕೆಲಕಾಲ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.
