ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದ ಆಡಳಿತ ಭವನದಲ್ಲಿ ಗುರುವಾರ ಭಯೋತ್ಪಾದನಾ ವಿರೋಧಿ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಪ್ರೊ. ಕೆ.ಆರ್. ಮಂಜುನಾಥ್ ಅವರು ಭಯೋತ್ಪಾದನಾ ವಿರೋಧಿ ದಿನದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಈ ಸಂದರ್ಭದಲ್ಲಿ ಪರೀಕ್ಷಾಂಗ ಕುಲಸಚಿವ ಪ್ರೊ. ತಿಮ್ಮರಾಯಪ್ಪ, ದೂರ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕ ಪ್ರೊ. ಜಗನ್ನಾಥ ಡಾಂಗೆ, ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರೊ. ಎಂ.ಆರ್. ಸತ್ಯಪ್ರಕಾಶ್, ವಾಣಿಜ್ಯ ನಿಕಾಯದ ಡೀನ್ ಪ್ರೊ. ಹೆಚ್.ಎನ್. ರಮೇಶ್, ಉಪಕುಲಸಚಿವರು ಹಾಗೂ ವಿಶ್ವವಿದ್ಯಾಲಯದ ಸಿಬ್ಬಂದಿ ಹಾಜರಿದ್ದರು.
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್ ನಂಬರ್: 7411700200
