ಶಿವಮೊಗ್ಗ ಸಿಟಿಯಲ್ಲಿ ಪೊಲೀಸರ ಪಥ ಸಂಚಲನ, ಕಾರಣವೇನು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ಶಿವಮೊಗ್ಗ: ಬಕ್ರೀದ್‌ ಹಬ್ಬದ ಹಿನ್ನೆಲೆ ಶಿವಮೊಗ್ಗ ನಗರದ ವಿವಿಧೆಡೆ ಪೊಲೀಸರು ರೂಟ್‌ ಮಾರ್ಚ್‌ ನಡೆಸಿದರು. ಮುನ್ನೆಚ್ಚರಿಕೆ ಕ್ರಮವಾಗಿ ಪಥ ಸಂಚಲನ ನಡೆಸಲಾಗಿದೆ ಎಂದು ಪೊಲೀಸ್‌ ಇಲಾಖೆ ತಿಳಿಸಿದೆ.  

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ದೊಡ್ಡಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ರೂಟ್‌ ಮಾರ್ಚ್‌ ನಡೆಸಲಾಯಿತು. ಠಾಣೆ ವ್ಯಾಪ್ತಿಯ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಪಥ ಸಂಚಲನ ನಡೆಸಿದರು. ಇನ್ನು, ಬಕ್ರೀದ್‌ ಹಬ್ಬದ ಹಿನ್ನೆಲೆ ನಗರದಲ್ಲಿ ಭದ್ರತೆ ಹೆಚ್ಚಳ ಮಾಡಲಾಗಿದೆ.

Doddapete-Police-Route-march-in-Shimoga-City

ಬಕ್ರೀದ್‌ ಹಬ್ಬವನ್ನ ಶಾಂತಿಯುತವಾಗಿ ಆಚರಿಸಲು ಜಿಲ್ಲೆಯಲ್ಲಿ ಪೊಲೀಸರು ಹಲವು ಕ್ರಮ ಕೈಗೊಂಡಿದ್ದಾರೆ. ಸರ್ವ ಧರ್ಮದ ಮುಖಂಡರು, ವಿವಿಧ ಸಂಘಟನೆಗಳ ಪ್ರಮುಖರ ಸಭೆಗಳನ್ನು ನಡೆಸಲಾಗುತ್ತಿದೆ. ವಿವಿದ ಬಡಾವಣೆಗಳಲ್ಲಿ ಪೊಲೀಸ್‌ ಇಲಾಖೆಯಿಂದ ಜನ ಸಂಪರ್ಕ ಸಭೆ ನಡೆಯುತ್ತಿವೆ.