ಶಿವಮೊಗ್ಗ: ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-12 ಮತ್ತು 13ರ ವ್ಯಾಪ್ತಿಯಲ್ಲಿ ಮೇ 31 ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 1 ರವರೆಗೆ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಈ ಅವಧಿಯಲ್ಲಿ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಆಲ್ಕೋಳ, ಎಸ್.ಎಲ್.ವಿ. ಬಡಾವಣೆ, ಗಜಾನನ ಲೇಔಟ್, ಐಶ್ವರ್ಯ ಬಡಾವಣೆ, ಜೆ.ಹೆಚ್. ಪಟೇಲ್ ಬಡಾವಣೆ ಎ ರಿಂದ ಎಫ್ ಬ್ಲಾಕ್, ಮುನಿಯಪ್ಪ ಲೇಔಟ್, ಸಂಗೊಳ್ಳಿ ರಾಯಣ್ಣ ಬಡಾವಣೆ, ಆದರ್ಶ ನಗರ, ಸಹ್ಯಾದ್ರಿನಗರ, ಸೋಮಿನಕೊಪ್ಪ, ವಿಜಯಲಕ್ಷ್ಮಿ ಲೇಔಟ್, ಸೋಮನಾಥ ಬಡಾವಣೆ, ನಿಸರ್ಗ ಲೇಔಟ್, ಹೊಂಗಿರಣ ಬಡಾವಣೆ, ಸೋಮಿನಕೊಪ್ಪ, ಗೆಜ್ಜೆನಹಳ್ಳಿ, ಅಂಬೇಡ್ಕರ್ ಕಾಲೋನಿ, ಹನುಮಂತನಗರ, ಜಕಾತಿಕೊಪ್ಪ, ಭೈರವಕೊಪ್ಪ, ದೇವಕಾತಿಕೊಪ್ಪ ಹಾಗೂ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್ ನಂಬರ್: 7411700200
