ಹೊಸನಗರ: ತಾಲೂಕಿನ ನಿಟ್ಟೂರು ಸಮೀಪದ ತಟ್ಟೆಕೊಡ್ಲು ಗ್ರಾಮದಲ್ಲಿ ಗನ್ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮಧ್ಯರಾತ್ರಿ ಘಟನೆ ಸಂಭವಿಸಿದೆ.
ತಟ್ಟೆಕೊಡ್ಲು ನಿವಾಸಿ ರಾಮಚಂದ್ರ ಭಟ್ (85) ಸಾವನ್ನಪ್ಪಿದ ದುರ್ದೈವಿ. ಭಾನುವಾರ ಮಧ್ಯರಾತ್ರಿ ಸಿಂಗಲ್ ಬ್ಯಾರಲ್ ಗನ್ನಿಂದ ತಾವೇ ಶೂಟ್ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಘಟನೆಯಲ್ಲಿ ರಾಮಚಂದ್ರ ಭಟ್ ಅವರ ತಲೆ ಛಿದ್ರವಾಗಿದೆ. ವಿಷಯ ತಿಳಿಯುತ್ತಿದ್ದಂತೆ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ರಾಮಚಂದ್ರ ಭಟ್ ಅವರು ಬಳಸಿದ ಸಿಂಗಲ್ ಬ್ಯಾರಲ್ ಗನ್ಗೆ ಲೈಸೆನ್ಸ್ ಇತ್ತೇ ಹಾಗೂ ವಯೋಸಹಜ ಅಶಕ್ತತೆಯ ನಡುವೆಯೂ ಅವರು ಗನ್ನ ಟ್ರಿಗರ್ ಪ್ರೆಸ್ ಮಾಡಿದ್ದು ಹೇಗೆ ಎಂಬುದನ್ನು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಸೋಕೋ ತಂಡ ಭೇಟಿ ನೀಡಲಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್ ನಂಬರ್: 7411700200
