ಸಾಗರ: ತಾಲೂಕಿನ ವಿವಿಧೆಡೆ ಭಾರಿ ಮಳೆಯಾಗುತ್ತಿದ್ದು ರಾಷ್ಟ್ರೀಯ ಹೆದ್ದಾರಿ 69ರ ಯಡೆಹಳ್ಳಿ ಪೆಟ್ರೋಲ್ ಬಂಕ್ ಬಳಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಇದರಿಂದ ಶಿವಮೊಗ್ಗ – ಸಾಗರ ನಡುವೆ ವಾಹನ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.
ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ರಸ್ತೆಗೆ ಬಿದ್ದಿರುವ ಮರ ತೆರವು ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಆದ್ದರಿಂದ ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳು ಅನಿವಾರ್ಯವಾಗಿ ಪರ್ಯಾಯ ಮಾರ್ಗದಲ್ಲಿ ಸಂಚರಿಸಬೇಕಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ತುಂಗಾ ಡ್ಯಾಮ್ ಒಳ, ಹೊರ ಹರಿವು ತುಸು ಹೆಚ್ಚಳ, ಭದ್ರಾ, ಲಿಂಗನಮಕ್ಕಿಗೆ ಎಷ್ಟು ನೀರು ಹರಿದು ಬರುತ್ತಿದೆ?
ಸಾಗರ ಕಡೆಯಿಂದ ಶಿವಮೊಗ್ಗಕ್ಕೆ ಪ್ರಯಾಣಿಸುವವರು ರಿಪ್ಪನ್ಪೇಟೆ-ಆಯನೂರು ಮಾರ್ಗವಾಗಿ ಸಂಚರಿಸಬೇಕು. ಹಾಗೆಯೇ ಆಯನೂರು ಕಡೆಯಿಂದ ಸಾಗರಕ್ಕೆ ತೆರಳುವ ಪ್ರಯಾಣಿಕರು ಆಯನೂರು-ರಿಪ್ಪನ್ಪೇಟೆ-ಆನಂದಪುರ ಮಾರ್ಗವನ್ನು ಬಳಸುವಂತೆ ಆನಂದಪುರ ಪಿಎಸ್ಐ ತಿಳಿಸಿದ್ದಾರೆ. ಮರ ತೆರವು ಕಾರ್ಯಾಚರಣೆ ಬಳಿಕ ಈ ಮಾರ್ಗದಲ್ಲಿ ವಾಹನ ಸಂಚಾರ ಪುನಾರಂಭವಾಗಲಿದೆ.

ಈ ಸುದ್ದಿಯನ್ನೂ ಓದಿ
ರಂಗಮಂದಿರದ ಚೇರ್ಗಳು ಪೀಸ್ ಪೀಸ್, ಕಿಟಕಿ ಗಾಜು ಪುಡಿ, ಬೆಂಕಿ ಹಚ್ಚಲು ಯತ್ನಿಸಿದ ದುಷ್ಕರ್ಮಿಗಳು