ತೀರ್ಥಹಳ್ಳಿ: ಇನ್ಸ್ಟಾಗ್ರಾಮ್ ಖಾತೆಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆಯಾಗುವ ಫೋಟೋವನ್ನು ಸ್ಟೋರಿಯಾಗಿ ಅಪ್ಲೋಡ್ ಮಾಡಿದ್ದ ಕಾಲೇಜು ವಿದ್ಯಾರ್ಥಿಯೊಬ್ಬನ ವಿರುದ್ಧ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪದವಿ ವಿದ್ಯಾರ್ಥಿಯೊಬ್ಬ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಗೋಮಾಂಸ ಸ್ವಚ್ಛಗೊಳಿಸುವ ಫೋಟೋ ಪ್ರಕಟಿಸಿದ್ದ. ಈ ಪೋಸ್ಟ್ನಿಂದ ಧಾರ್ಮಿಕ ಭಾವನೆಗೆ ಧಕ್ಕೆಯಾಗುತ್ತದೆ ಎಂದು ತಿಳಿದಿದ್ದರೂ ಆತ ಇದನ್ನು ಅಪ್ಲೋಡ್ ಮಾಡಿದ್ದನು ಎಂದು ಆರೋಪಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್ ನಂಬರ್: 7411700200
