ಸೊರಬ: ತಾಲೂಕಿನ ಚಂದ್ರಗುತ್ತಿ ಹೋಬಳಿಯ ಕುಂಟಗಳಲೆ (ಶಿಂಡ್ಲಿ) ಭಾಗದ ಅರಣ್ಯ ಪ್ರದೇಶದಲ್ಲಿ ಚಿರತೆಯೊಂದು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಪ್ರಾಣಿ ಶಿಕಾರಿಗಾಗಿ ವಿದ್ಯುತ್ ಹರಿಸಿ ಕೊಲ್ಲಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.
ಸುದ್ದಿಯ ಮುಂದಿನ ಭಾಗ ಕೆಳಗಿದೆ
ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ. ಈ ಭಾಗದಲ್ಲಿ ಈ ಹಿಂದೆ ಕೂಡ ಕಾಡುಕೋಣ, ಕಡವೆ ಹಾಗೂ ಜಿಂಕೆಗಳು ಸಾವು ಸಂಭವಿಸಿತ್ತು. ಇವೆಲ್ಲವನ್ನೂ ಬೇಟೆಗಾರರು ವಿದ್ಯುತ್ ತಂತಿ ಅಳವಡಿಸಿ ಕೊಂದಿದ್ದಾರೆ ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ.

