ಶಿವಮೊಗ್ಗದಲ್ಲಿ ರಿಜ್ವಾನ್‌ ಅರ್ಷದ್‌ಗೆ ಸಚಿವ ಸ್ಥಾನಕ್ಕಾಗಿ ಮಸೀದಿಯಲ್ಲಿ ಪ್ರಾರ್ಥನೆ

ಶಿವಮೊಗ್ಗ: ಕಾಂಗ್ರೆಸ್ ಶಾಸಕ ಹಾಗೂ ಯುವ ನಾಯಕ ರಿಜ್ವಾನ್ ಅರ್ಷದ್ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಅವರ ಅಭಿಮಾನಿ ಬಳಗದ ವತಿಯಿಂದ ನಗರದ ಕೋರ್ಟ್‌ ಸರ್ಕಲ್‌ನಲ್ಲಿರುವ ಹಜ್ರತ್ ಸೈಯದ್ ಷಾ ಅಲೀಂ ದೀವಾನ್ ಷಾ ಖಾದ್ರಿ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಸುದ್ದಿಯ ಮುಂದಿನ ಭಾಗ ಕೆಳಗಿದೆ

ರಿಜ್ವಾನ್ ಅರ್ಷದ್ ಅಭಿಮಾನಿ ಬಳಗದ ಅಧ್ಯಕ್ಷ ಮೊಹಮ್ಮದ್ ಆರಿಫ್ ಉಲ್ಲಾ ನೇತೃತ್ವದಲ್ಲಿ ದರ್ಗಾಕ್ಕೆ ಭೇಟಿ ನೀಡಿದ ಪ್ರಮುಖರು, ಚಾದರ ಹೊದಿಸಿ ಪ್ರಾರ್ಥನೆ ಸಲ್ಲಿಸಿದರು.

Prayer-For-Rizwan-Arshad.

ಈ ಸಂದರ್ಭ ಮಾಧ್ಯಮಗಳಿಗೆ ಮಾತನಾಡಿದ ಮೊಹಮ್ಮದ್ ಆರಿಫ್ ಉಲ್ಲಾ, ‘ರಿಜ್ವಾನ್ ಅವರು ಎನ್‌ಎಸ್‌ಯುಐ ಮತ್ತು ಯೂತ್ ಕಾಂಗ್ರೆಸ್ ರಾಜ್ಯ ಅಧ್ಯಕ್ಷರಾಗಿ ಸಂಘಟನೆಯನ್ನು ಬಲಪಡಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಯುವಕರನ್ನು ಸಂಘಟಿಸುವಲ್ಲಿ ಅವರ ಪಾತ್ರ ದೊಡ್ಡದಾಗಿದೆ. ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರ ಮಾರ್ಗದರ್ಶನದಂತೆ ಯುವ ನಾಯಕತ್ವಕ್ಕೆ ಆದ್ಯತೆ ನೀಡಬೇಕಾಗಿದ್ದು, ಮುಖ್ಯಮಂತ್ರಿಗಳು ಹಾಗೂ ಹಿರಿಯ ನಾಯಕರು ರಿಜ್ವಾನ್ ಅವರಿಗೆ ಸಚಿವ ಸ್ಥಾನ ನೀಡಬೇಕು’ ಎಂದು ಮನವಿ ಮಾಡಿದರು.

Shivamogga Live Promotion

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.