ಶಿವಮೊಗ್ಗದಲ್ಲಿ ರೌಡಿಶೀಟರ್ ಬರ್ಬರ ಹತ್ಯೆ, ಮುಖ ಗುರುತು ಸಿಗದಂತೆ ಕೊಚ್ಚಿ ಕೊಲೆ

ಶಿವಮೊಗ್ಗ: ನಗರದ ಗಾಂಧಿ ಬಜಾರ್ 1ನೇ ಕ್ರಾಸ್‌ನ ಕರಿದೇವರ ಕೇರಿಯಲ್ಲಿ ರೌಡಿಶೀಟರ್ ನರಸಿಂಹ (39) ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ್ದಾರೆ.

ಸುದ್ದಿಯ ಮುಂದಿನ ಭಾಗ ಕೆಳಗಿದೆ

ನಗರದ ಗೋವಿಂದಾಪುರ ಆಶ್ರಯ ಬಡಾವಣೆ ನಿವಾಸಿಯಾದ ನರಸಿಂಹನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮನೆಯೊಂದರ ಓಣಿ ಒಳಗೆ ಆತನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ.

120626 Rowdy Sheeter Narasimha Case

ಗುರುತು ಸಿಗದಂತೆ ದಾಳಿ

ನರಸಿಂಹನ ಮೇಲೆ ಮನಸೋಯಿಚ್ಛೆ ದಾಳಿ ನಡೆಸಲಾಗಿದೆ. ಆತನ ತಲೆ ಹಾಗೂ ಕೈ ಭಾಗಕ್ಕೆ ದಾಳಿ ಮಾಡಲಾಗಿದೆ. ದಾಳಿಯ ಭೀಕರತೆಗೆ ನರಸಿಂಹನ ಕೈಗಳು ತುಂಡಾಗಿದ್ದು, ಮುಖ ಗುರುತು ಸಿಗದಂತಾಗಿದೆ. ಘಟನೆಯಲ್ಲಿ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

Shivamogga Live Promotion

ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿಯೇ ಈ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎ.ಜಿ. ಕಾರಿಯಪ್ಪ ಹಾಗೂ ಕೋಟೆ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.