ಲಕ್ಷ ಲಕ್ಷ ಮೌಲ್ಯದ ಪೈಪ್‌ ಕಳ್ಳತನ ಮಾಡಿದ್ದ ಆರೋಪಿ ಅರೆಸ್ಟ್‌

ಭದ್ರಾವತಿ: ಗ್ರಾಮೀಣ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಜಲ ಜೀವನ್ ಮಿಷನ್ ಯೋಜನೆಯ ಪೈಪ್‌ಗಳನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ಹೊಳೆಹೊನ್ನೂರು ಪೊಲೀಸರು ಬಂಧಿಸಿದ್ದಾರೆ.

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಭದ್ರಾವತಿಯ ರಾಕೇಶ (30) ಬಂಧಿತ ಆರೋಪಿ. ಈತನಿಂದ ₹7,92,000 ಅಂದಾಜು ಮೌಲ್ಯದ 18 ಬಂಡಲು ಪೈಪ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Holehonnuru-Police-Station-Bhadravathi-jpg

ಯೋಜನೆಗಾಗಿ ತರಲಾಗಿದ್ದ ಪೈಪ್ ಬಂಡಲುಗಳು ಕಳುವಾದ ಬಗ್ಗೆ ಇಂಜಿನಿಯರ್ ಅವಿನಾಶ್ ಅವರು ಜೂನ್ 11ರಂದು ಹೊಳೆಹೊನ್ನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆರೋಪಿ ಪತ್ತೆಗಾಗಿ ರಚಿಸಲಾಗಿದ್ದ ಪೊಲೀಸರ ವಿಶೇಷ ತಂಡವು ಕಾರ್ಯಾಚರಣೆ ನಡೆಸಿ ರಾಕೇಶನನ್ನು ಬಂಧಿಸಿದೆ.

Nanjappa Hospital Advertisement

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
Shivamogga Live Promotion