ತೀರ್ಥಹಳ್ಳಿ ಪೊಲೀಸರ ಕಾರ್ಯಾಚರಣೆ, ಶಿವಮೊಗ್ಗದ ಟಿಪ್ಪುನಗರ, ಅಣ್ಣಾನಗರದ ಇಬ್ಬರು ಅರೆಸ್ಟ್‌, ಏನಿದು ಕೇಸ್‌?

ತೀರ್ಥಹಳ್ಳಿ: ತಾಲೂಕಿನ ಗಡಿಕಲ್ ಗ್ರಾಮದಲ್ಲಿ ತಡರಾತ್ರಿ ಗೋವುಗಳ ಕಳವಿಗೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಶಿವಮೊಗ್ಗದ ಟಿಪ್ಪುನಗರ ನಿವಾಸಿ ರೋಷನ್ ಬೇಗ್ (31) ಮತ್ತು ಅಣ್ಣಾನಗರ ನಿವಾಸಿ ಇಮ್ರಾನ್ (39) ಬಂಧಿತರು ಎಂದು ಗುರುತಿಸಲಾಗಿದೆ. ಬಂಧಿತರಿಂದ ಕೃತ್ಯಕ್ಕೆ ಬಳಸಲಾಗಿದ್ದ ಅಂದಾಜು ₹4 ಲಕ್ಷ ಮೌಲ್ಯದ ಎರ್ಟಿಗಾ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Cow-Theft-Attempt-at-Gadikal-in-Thirthahalli

ಡಿವೈಎಸ್ಪಿ ಅರವಿಂದ್ ಕಲಗುಜ್ಜಿ, ಇನ್‌ಸ್ಪೆಕ್ಟರ್ ಇಮ್ರಾನ್ ಬೇಗ್, ಪಿಎಸ್‌ಐಗಳಾದ ಸುಷ್ಮಾ ಆರ್., ಯುವರಾಜ್ ಹಾಗೂ ಸಿಬ್ಬಂದಿ ಲಿಂಗೇಗೌಡ, ಕುಮಾರ, ಪ್ರಸನ್ನ, ದೀಪಕ್, ಪ್ರದೀಪ ಕೆ.ಪಿ., ಮಂಜುನಾಥ್ ಹಂಪಿಹೊಳಿ ಮತ್ತು ಪ್ರಮೋದ್ ಜೆ. ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Nanjappa Hospital Advertisement

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
Shivamogga Live Promotion