ಭದ್ರಾವತಿಯಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ಮನೆಗೆ ನುಗ್ಗಿ ಕತ್ತಿ ಬೀಸಿದ ಯುವಕ

ಭದ್ರಾವತಿ: ಸಾರ್ವಜನಿಕವಾಗಿ ಮಹಿಳೆಯರು ಹಾಗೂ ಯುವತಿಯರ ಬಗ್ಗೆ ಅವಾಚ್ಯವಾಗಿ ಮಾತನಾಡುತ್ತಿದ್ದ ವ್ಯಕ್ತಿಯೊಬ್ಬನಿಗೆ ಬುದ್ಧಿವಾದ ಹೇಳಿದ್ದಕ್ಕೆ, ಆತ ಮನೆಗೆ ನುಗ್ಗಿ ಕತ್ತಿಯಿಂದ ಕೊಲೆಗೆ ಯತ್ನಿಸಿರುವ ಘಟನೆ ಭದ್ರಾವತಿ ನಗರದಲ್ಲಿ ನಡೆದಿದೆ.

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಆರೋಪಿಯು ರಸ್ತೆಯಲ್ಲಿ ಮಹಿಳೆಯರ ಬಗ್ಗೆ ಕೆಟ್ಟದಾಗಿ ಮಾತನಾಡುವುದು ಹಾಗೂ ಯುವತಿಯರ ಇನ್‌ಸ್ಟಾಗ್ರಾಂ ಮತ್ತು ಫೇಸ್‌ಬುಕ್ ಖಾತೆಗಳನ್ನು ಕೊಡು ಎಂದು ಪೀಡಿಸುತ್ತಿದ್ದ ಎನ್ನಲಾಗಿದೆ. ಈ ವರ್ತನೆಯನ್ನು ಗಮನಿಸಿದ ವ್ಯಕ್ತಿಯೊಬ್ಬರು ಅವರ ಪರಿಚಿತರ ಜೊತೆಗೆ ಸೇರಿ ಆರೋಪಿಗೆ ಇಂತಹ ಕೃತ್ಯಗಳನ್ನು ಮಾಡದಂತೆ ಬುದ್ಧಿವಾದ ಹೇಳಿದ್ದರು.

BHADRAVATHI-NEWS-GRAPHICS-BY-SHIVAMOGGA-LIVE.

ಮನೆಗೆ ನುಗ್ಗಿ ಕತ್ತಿಯಿಂದ ಅಟ್ಯಾಕ್‌

ಬುದ್ಧಿವಾದ ಹೇಳಿದ್ದಕ್ಕೆ ಆಕ್ರೋಶಗೊಂಡಿದ್ದ ಯುವಕ, ವ್ಯಕ್ತಿಯು ತಮ್ಮ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾಗ ಏಕಾಏಕಿ ಕತ್ತಿಯೊಂದಿಗೆ ಮನೆಗೆ ನುಗ್ಗಿದ್ದಾನೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಅಲ್ಲದೆ, ನನ್ನ ವಿರುದ್ಧವೇ ಮಾತನಾಡುತ್ತೀಯಾ ಎಂದು ಕಿರುಚಾಡುತ್ತಾ ಕುತ್ತಿಗೆಗೆ ಕತ್ತಿಯಿಂದ ಬೀಸಿದ್ದಾನೆ. ಈ ವೇಳೆ ವ್ಯಕ್ತಿಯು ತಕ್ಷಣ ತಪ್ಪಿಸಿಕೊಂಡ ಕಾರಣ ಕತ್ತಿಯು ಎಡ ಹುಬ್ಬಿನ ಹತ್ತಿರ ತಾಗಿ ರಕ್ತಗಾಯವಾಗಿದೆ.

Nanjappa Hospital Advertisement

ಸ್ಥಳೀಯರು ಹಾಗೂ ಸ್ನೇಹಿತರು ಓಡಿ ಬಂದಾಗ ಆರೋಪಿ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
Shivamogga Live Promotion