ಸುತ್ತುಕೋಟೆಯಲ್ಲಿ ಕೊಲೆ, ಯುವಕನ ತಲೆಗೆ ಮಾರಕಾಸ್ತ್ರದಿಂದ ಹೊಡೆದು ಹತ್ಯೆ, ಕಾರಣವೇನು?

ಶಿವಮೊಗ್ಗ: ತಾಲೂಕಿನ ಸುತ್ತುಕೋಟೆ ಗ್ರಾಮದಲ್ಲಿ ಯುವಕನೊಬ್ಬನನ್ನು ಮನೆಯಲ್ಲಿಯೇ ಭೀಕರವಾಗಿ ಕೊಲೆ ಮಾಡಲಾಗಿದೆ. ಸುತ್ತುಕೋಟೆ ನಿವಾಸಿ ಪ್ರವೀಣ್ (29) ಕೊಲೆಯಾದ ಯುವಕ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಂಜಪ್ಪ ಲೈಫ್‌ ಕೇರ್‌ನಲ್ಲಿ ಉಚಿತ ಸಮಾಲೋಚನೆ, 40% ರಿಯಾಯಿತಿ Nanjappa Hospital Advertisement ಇಲ್ಲಿ ಕ್ಲಿಕ್‌ ಮಾಡಿ ನೇರವಾಗಿ ಕರೆ ಮಾಡಿ ಹೆಸರು ನೋಂದಾಯಿಸಿ

ಪ್ರವೀಣ್‌ ಟ್ರಾಕ್ಟರ್ ಬಾಡಿಗೆ ಹಾಗೂ ಇತರೆ ಕೆಲಸಗಳನ್ನು ಮಾಡಿಕೊಂಡಿದ್ದ ಎನ್ನಲಾಗಿದೆ. ಎಂದಿನಂತೆ ನಿನ್ನೆ ರಾತ್ರಿ ಊಟ ಮುಗಿಸಿ ಮನೆಯಲ್ಲಿ ಮಲಗಿದ್ದ ವೇಳೆ ಈ ಕೃತ್ಯ ನಡೆದಿದೆ. ತಲೆ ಭಾಗದಲ್ಲಿ ಮಾರಕಾಸ್ತ್ರದಿಂದ ಹೊಡೆದು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

Suttukote-Praveen-incident-in-Kumsi-Police-Station-Limits.

ಬೆಳಗ್ಗೆ ಪ್ರಕರಣ ಬೆಳಕಿಗೆ

ಕೆಲಸವೊಂದಕ್ಕೆ ಬರುವಂತೆ ಪ್ರವೀಣ್‌ ಕೆಲವು ಯುವಕರಿಗೆ ತಿಳಿಸಿದ್ದನು. ಅದರಂತೆ ಇಂದು ಬೆಳಗ್ಗೆ ಯುವಕರು ಪ್ರವೀಣ್‌ಗೆ ಕರೆ ಮಾಡಿದ್ದರು. ಆದರೆ ಆತ ಫೋನ್ ಕರೆ ಸ್ವೀಕರಿಸದಿದ್ದಾಗ ಸಂಶಯಗೊಂಡು ಮನೆಯೊಳಗೆ ಪರಿಶೀಲಿಸಿದ್ದಾರೆ. ಈ ವೇಳೆ ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ.

ವ್ಯವಹಾರಿಕ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಕುಂಸಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion