ಭದ್ರಾವತಿ: ಮೆಸ್ಕಾಂ ಗ್ರಾಮೀಣ ಉಪವಿಭಾಗದ ಘಟಕ-1ರ ಶಾಖಾ ವ್ಯಾಪ್ತಿಯಲ್ಲಿ ಮಾರ್ಗಗಳ ತುರ್ತು ಕಾಮಗಾರಿ ನಿರ್ವಹಣೆ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಜೂ.23ರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಅರಳಿಕೊಪ್ಪ, ರಬ್ಬರ್ ಕಾಡು, ಬಾಳೆಮಾರನಹಳ್ಳಿ, ಸುಲ್ತಾನ್ಮಟ್ಟಿ, ತಾರೀಕಟ್ಟೆ, ಹೊಳೆಗಂಗೂರು, ಚಿಕ್ಕಗೊಪ್ಪೇನಹಳ್ಳಿ, ಗೊಂದಿ, ಕಾಳನಕಟ್ಟೆ, ಹಿರಿಯೂರು, ಹೊನ್ನೆಗುಡ್ಡ ನೀರು ಸರಬರಾಜು ಕೇಂದ್ರ, ಕಂಬದಾಳ್ ಹೊಸೂರು, ಹೊನ್ನಟ್ಟಿ ಹೊಸೂರು ಕ್ಯಾಂಪ್, ಜಂಕ್ಷನ್ ನೀರು ಸರಬರಾಜು ಕೇಂದ್ರ ಸಿದ್ದರಹಳ್ಳಿ, ಹುಣಸೇಕಟ್ಟೆ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಇದನ್ನೂ ಓದಿ:➤ ವಿದ್ಯಾರ್ಥಿಗಳಿಗೆ ₹35,000 ವರೆಗೆ ಪ್ರೋತ್ಸಾಹ ಧನ, ಆನ್ಲೈನ್ ಮೂಲಕ ಅರ್ಜಿ ಆಹ್ವಾನ, ಯಾರೆಲ್ಲ ಅರ್ಹರು?
