ಶಿವಮೊಗ್ಗ: ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ.ಜಾರ್ಜ್ ಅವರು ಜೂನ್ 30ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಪ್ರಮುಖ ಸಭೆ ನಡೆಸಲಿದ್ದಾರೆ. ➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಜೂನ್ 30ರ ಮಂಗಳವಾರ ಮಧ್ಯಾಹ್ನ 1:45ಕ್ಕೆ ದಾವಣಗೆರೆಯಿಂದ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗದ ಸರ್ಕ್ಯೂಟ್ ಹೌಸ್ ಹೆಲಿಪ್ಯಾಡ್ಗೆ ಸಚಿವರು ಆಗಮಿಸಲಿದ್ದಾರೆ. ಮಧ್ಯಾಹ್ನ 2:15ಕ್ಕೆ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿರುವ ಪ್ರಕೃತಿ ವಿಕೋಪ ನಿರ್ವಹಣೆಯ ತಯಾರಿ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಸಭೆಯ ಬಳಿಕ ಸಂಜೆ 4:15ಕ್ಕೆ ಶಿವಮೊಗ್ಗದ ಹೆಲಿಪ್ಯಾಡ್ನಿಂದ ಹೆಲಿಕಾಪ್ಟರ್ ಮೂಲಕ ಚಿಕ್ಕಮಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಶಿವಮೊಗ್ಗ JNNCE ಕಾಲೇಜಿನಲ್ಲಿ ADMISSION ಶುರು

