ಏಣಿಯಿಂದ ಬಿದ್ದು ಮೆಸ್ಕಾಂ ಕಿರಿಯ ಇಂಜಿನಿಯರ್‌ ಸಾವು, ಹೇಗಾಯ್ತು ಘಟನೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ಆನವಟ್ಟಿ: ಪಟ್ಟಣದ ಸೊರಬ ರಸ್ತೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಖಾಸಗಿ ಕಟ್ಟಡ ಕಾಮಗಾರಿಯ ಪರಿಶೀಲನೆಗಾಗಿ ಭಾನುವಾರ ತೆರಳಿದ್ದ ಮೆಸ್ಕಾಂ ಕಿರಿಯ ಎಂಜಿನಿಯರ್ ಒಬ್ಬರು ಏಣಿಯಿಂದ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಮೆಸ್ಕಾಂ ಜಡೆ ಶಾಖೆಯ ಕಿರಿಯ ಎಂಜಿನಿಯರ್ ಮಹಾನಿಂಗ್ (ರಾಮು) ಅಪರಾಜ್ (46) ಮೃತಪಟ್ಟವರು. ಮೃತರ ಅಂತ್ಯಕ್ರಿಯೆಯು ಸೋಮವಾರ ನೆರವೇರಿತು. ಮೃತರು ಪತ್ನಿಯನ್ನು ಅಗಲಿದ್ದಾರೆ.

Anavatti-MESCOM-Engineer-Fell-from-Ladder

ಕಟ್ಟಡದ ಪರಿಶೀಲನೆಗಾಗಿ ಏಣಿ ಹತ್ತಿ ವೀಕ್ಷಿಸುತ್ತಿದ್ದಾಗ ಇವರು ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಬೀಳುವ ರಭಸಕ್ಕೆ ಕಟ್ಟಡದ ಗೋಡೆಗೆ ತಲೆ ಬಡಿದು ಪ್ರಜ್ಞಾಹೀನರಾಗಿದ್ದ ಅವರನ್ನು ತಕ್ಷಣವೇ ಆನವಟ್ಟಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಖಚಿತಪಡಿಸಿದ್ದಾರೆ. ಘಟನೆ ಕುರಿತು ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.