ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 19 ನವೆಂಬರ್ 2019
ವಾಹನಗಳನ್ನು ಅಡ್ಡಗಟ್ಟಿ ಆಯುಧ ತೋರಿಸಿ ಬೆದರಿಕೆಯೊಡ್ಡಿ ಹಣ ವಸೂಲಿ ಮಾಡುತ್ತಿದ್ದ ರೌಡಿಯೊಬ್ಬನನ್ನು ಗಡಿಪಾರು ಮಾಡಲಾಗಿದೆ. ಈ ಸಂಬಂಧ ಶಿವಮೊಗ್ಗ ಉಪವಿಭಾಗಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಗುರುಪುರದ ಸುನಿಲ್ ಅಲಿಯಾಸ್ ಬೆಕ್ಕು (25) ಎಂಬಾತನನ್ನು ಗಡಿಪಾರು ಮಾಡಲಾಗಿದೆ. ಈತನ ವಿರುದ್ಧ ಇದ್ದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಗಡಿಪಾರು ಮಾಡಲಾಗಿದೆ.
ಏನೆಲ್ಲ ಆರೋಪಗಳಿವೆ?
ಸುನಿಲ್ ಅಲಿಯಾಸ್ ಬೆಕ್ಕು ವಿರುದ್ಧ ಕೊಲೆ, ಕೊಲೆ ಬೆದರಿಕೆ, ಗುಂಪು ಕಟ್ಟಿಕೊಂಡು ಹೊಡೆದಾಡುವುದು ಸೇರಿದಂತೆ ಹಲವು ಆರೋಪಗಳಿವೆ. ಈತನ ವಿರುದ್ಧ ಶಿವಮೊಗ್ಗ ಗ್ರಾಮಾಂತರ ಮತ್ತು ವಿನೋಬನಗರ ಠಾಣೆಯಲ್ಲಿ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿವೆ.

ಜಾಮೀನು ಮೇಲೆ ಬಂದು ಮತ್ತದೆ ಕೃತ್ಯ
ಸುನಿಲ್ ಹಲವು ಬಾರಿ ಬಂಧನಕ್ಕೊಳಗಾಗಿದ್ದಾನೆ. ಬಳಿಕ ಜಾಮೀನು ಮೇಲೆ ಹೊರಬಂದು ರೌಡಿ ಚಟುವಟಿಕೆ ಮುಂದುವರೆಸಿದ್ದಾನೆ. ಈ ಹಿನ್ನೆಲಯಲ್ಲಿ ಈತನನ್ನು ಗಡಿಪಾರು ಮಾಡಬೇಕು ಎಂದು ಪೊಲೀಸರು ಉಪವಿಭಾಗಾಧಿಕಾರಿಗೆ ಅರ್ಜಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ಶಿವಮೊಗ್ಗ ಉಪವಿಭಾಗಾಧಿಕಾರಿ ಟಿ.ವಿ.ಪ್ರಕಾಶ್, ಗುರುಪುರದ ಸುನಿಲ್ ಅಲಿಯಾಸ್ ಬೆಕ್ಕುನನ್ನು ಒಂದು ವರ್ಷ ಗಡಿಪಾರು ಮಾಡಲಾಗಿದೆ ಎಂದು ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






