ಹೊಳೆಹೊನ್ನೂರು: ಸಮೀಪದ ಅರಹತೊಳಲು ಗ್ರಾಮದಲ್ಲಿ ಕಳೆದ ನಾಲ್ಕು ದಿನಗಳಿಂದ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ್ದ ಮುಸಿಯವನ್ನು ಬನವಾಸಿಯಿಂದ ಬಂದ ವಿಶೇಷ ತಂಡವು ಸೆರೆಹಿಡಿದಿದೆ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಕಳೆದ ಭಾನುವಾರ ಈ ಮುಸಿಯ ಗ್ರಾಮದ ಬಾಲಕನೊಬ್ಬನ ಮೇಲೆ ದಾಳಿ ನಡೆಸಿ ಗಾಯಗೊಳಿಸಿತ್ತು. ಒಂಟಿಯಾಗಿ ಯಾರೇ ಕಂಡರೂ ದಾಳಿಗೆ ಮುಂದಾಗುತ್ತಿದ್ದರಿಂದ ಗ್ರಾಮಸ್ಥರು ಮನೆಯಿಂದ ಹೊರಬರಲು ಭಯ ಪಡುವಂತಾಗಿತ್ತು. ಈ ಹಿನ್ನಲೆ ಅರಣ್ಯ ಇಲಾಖೆ ಹಾಗೂ ಗ್ರಾಮ ಪಂಚಾಯತಿ ವತಿಯಿಂದ ಬನವಾಸಿಯ ವೀರಯ್ಯ ಸಗಣಚಾರಿ ನೇತೃತ್ವದ ತಂಡವನ್ನು ಕರೆಯಿಸಲಾಯಿತು.

ಮುಸಿಯವನ್ನು ಸೆರೆ ಹಿಡಿಯಲಾಗಿದ್ದು, ಅದನ್ನು ದಟ್ಟ ಅರಣ್ಯ ಪ್ರದೇಶಕ್ಕೆ ಬಿಡುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿ ಮನೋಹರ್, ಕೆ. ಹನುಮಂತಪ್ಪ ಹಾಗೂ ಪಿಡಿಒ ಎನ್. ದೊರೆ ಪಾಲ್ಗೊಂಡಿದ್ದರು.