ಸಾಗರ: ಪಟ್ಟಣದ ಜಂಬಗಾರು ಬಡಾವಣೆಯ ಸರ್ವೇ ನಂ. 63ರ 4 ಎಕರೆ ಭೂಮಿ ಅಕ್ರಮವಾಗಿ ಖಾತೆಯಾಗಿರುವ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ಸೋಮವಾರ ನಗರಸಭೆಗೆ ದಿಢೀರ್ ಭೇಟಿ ನೀಡಿ ಕಡತಗಳನ್ನು ಪರಿಶೀಲಿಸಿದರು.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಈ ಅಕ್ರಮದ ಸಂಬಂಧ ಲೋಕಾಯುಕ್ತರು ಸುಮೋಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ತನಿಖೆಗೆ ಅಗತ್ಯ ದಾಖಲೆ ಹಾಗೂ ಮಾಹಿತಿ ಸಂಗ್ರಹಿಸುವ ಉದ್ದೇಶದಿಂದ ನಗರಸಭೆಗೆ ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸಲಾಗಿದೆ.

ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ್, ಇನ್ಸ್ಪೆಕ್ಟರ್ ರುದ್ರೇಶ್, ವೀರಬಸಪ್ಪ ಹಾಗೂ ಸಿಬ್ಬಂದಿ ಟೀಕಪ್ಪ, ಮಂಜುನಾಥ್, ಸುರೇಂದ್ರ, ಆದರ್ಶ್, ಚಂದ್ರಬಾಯಿ, ಅಂಜಲಿ, ಚೇತನ್ ಮತ್ತು ಆನಂದ್ ಇದ್ದರು.
ಇದನ್ನೂ ಓದಿ:➤ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ, ಕಾರಣವೇನು?