ಶಿವಮೊಗ್ಗ ಲೈವ್
ಭದ್ರಾವತಿ: ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ. ಶಿವಕುಮಾರ್ ಅವರು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾಗಿ ಐದು ವರ್ಷಗಳ ಅವಧಿಗೆ ಆಯ್ಕೆಯಾಗಿದ್ದಾರೆ.
ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಶಿವಕುಮಾರ್ ಅವರಿಗೆ 18 ಮತಗಳು ಬಂದಿವೆ. ಇವರು ಬೆಂಗಳೂರು ವಿಭಾಗದಿಂದ ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ಪ್ರತಿನಿಧಿಯಾಗಿ ಮಹಾಮಂಡಳಕ್ಕೆ ಆಯ್ಕೆಯಾಗಿದ್ದಾರೆ. ಶಿವಕುಮಾರ್ ಅವರು ಭದ್ರಾವತಿ ತಾಲ್ಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘದ (ಟಿಪಿಸಿಎಂಎಸ್) ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಸಿ. ಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿಯೂ ಅವರು ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.
ಈ ಸುದ್ದಿಯನ್ನೂ ಓದಿ
ಸಾಗರದ ಕಾಸ್ಪಾಡಿ ಕೆರೆ ಏರಿ ಮೇಲೆ ತಪ್ಪಿದ ಅನಾಹುತ, ಹೇಗಾಯ್ತು ಅಪಘಾತ?

ಈ ಸುದ್ದಿಯನ್ನೂ ಓದಿ
ರಜಪೂತ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ಭದ್ರಾವತಿಯಲ್ಲಿ ಒತ್ತಾಯ