ಶಿವಮೊಗ್ಗದ ಮನೆಯಲ್ಲಿ ಚಾಲಕ ನೇಣಿಗೆ ಶರಣು

ಶಿವಮೊಗ್ಗ: ಕೌಟುಂಬಿಕ ಸಮಸ್ಯೆಗೆ ಮನನೊಂದು ಚಾಲಕ ನೇಣಿಗೆ ಶರಣಾಗಿದ್ದಾರೆ. ಹೊಸಮನೆ 5ನೇ ಅಡ್ಡರಸ್ತೆಯ ನಿವಾಸಿ ಮಂಜುನಾಥ್ (45) ಮೃತರು.

ಕೆಲವು ತಿಂಗಳ ಹಿಂದೆ ಮಂಜುನಾಥ್‌ ಅವರ ಪತ್ನಿ ತೀರಿಕೊಂಡಿದ್ದರು. ಇದರ ಬೆನ್ನಿಗೆ ಕೌಟುಂಬಿಕ ಸಮಸ್ಯೆಯಿಂದ ಅವರು ನೊಂದಿದ್ದರು ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಮಂಜುನಾಥ್‌ ಅವರ ಮೃತದೇಹವನ್ನು ಮೆಗ್ಗಾನ್‌ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ದೊಡ್ಡಪೇಟೆ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

crime name image

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ