ಗಣೇಶ ಚತುರ್ಥಿ, ಶಿವಮೊಗ್ಗದಲ್ಲಿ ಮೆಸ್ಕಾಂನಿಂದ ಸಿಂಗಲ್‌ ವಿಂಡೋ, ಏನಿದು?

ಶಿವಮೊಗ್ಗ: ಸಾರ್ವತ್ರಿಕ ಗಣೇಶೋತ್ಸವ ಹಿನ್ನೆಲೆ ಮೆಸ್ಕಾಂ ವತಿಯಿಂದ ಏಕಗವಾಕ್ಷಿ ಪದ್ಧತಿಯಲ್ಲಿ ವಿದ್ಯುತ್ ಮಂಜೂರಾತಿ ನೀಡಲಾಗುತ್ತಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸೆಪ್ಟೆಂಬರ್ 9 ರಿಂದ 14 ರವರೆಗೆ ಪ್ರತಿದಿನ ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ಈ ಸೌಲಭ್ಯ ಲಭ್ಯವಿರುತ್ತದೆ.

ಶಿವಮೊಗ್ಗ ನಗರದ ಗುಡ್‌ಲಕ್ ಸರ್ಕಲ್‌ ಹತ್ತಿರ ಸ್ವಾಮಿ ವಿವೇಕಾನಂದ ಬಡಾವಣೆಯ ನಗರ ಉಪ ವಿಭಾಗ-3 ಮೆಸ್ಕಾಂ ಕಚೇರಿಯಲ್ಲಿ ಅರ್ಜಿ ಸಲ್ಲಿಸಿ ಇದರ ಪ್ರಯೋಜನ ಪಡೆಯಬಹುದು. ಗಣೇಶೋತ್ಸವ ಸಮಿತಿಗಳು ಹಾಗೂ ಸಾರ್ವಜನಿಕರು ಅವಕಾಶವನ್ನು ಉಪಯೋಗ ಪಡೆಯುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Mescom-office-in-Shimoga

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ