ಶಿವಮೊಗ್ಗ ಲೈವ್
ಶಿವಮೊಗ್ಗ: ಕೆರೆಯಲ್ಲಿ ಈಜಲು ಹೋಗಿದ್ದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಶಿವಮೊಗ್ಗದ ಸೋಮಿನಕೊಪ್ಪ ಕೆರೆಯಲ್ಲಿ ಘಟನೆ ನಡೆದಿದೆ. ಮೊಹಮ್ಮದ್ ಬುರಾನ್ (16) ಮೃತ ಬಾಲಕ.
ಸೋಮಿನಕೊಪ್ಪದ ಸರ್ಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ಬುರಾನ್, ಇಂದು ಬೆಳಿಗ್ಗೆ ಕೆರೆಗೆ ಈಜಲು ಹೋಗಿದ್ದ ಎಂದು ತಿಳಿದು ಬಂದಿದೆ. ಈ ವೇಳೆ ಆತ ನಾಪತ್ತೆಯಾಗಿದ್ದ. ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿದರು. ಸ್ವಲ್ಪ ಸಮಯದ ಬಳಿಕ ಬುರಾನ್ ಮೃತದೇಹ ಪತ್ತೆಯಾಗಿದೆ. ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

