ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SAGARA | 08 ಡಿಸೆಂಬರ್ 2019
ನಾಳೆ ಉಪ ಚುನಾವಣೆ ಫಲಿತಾಂಶ ಬರಲಿದೆ. ಬಿಜೆಪಿ 13 ಸ್ಥಾನ, ಕಾಂಗ್ರೆಸ್ ಹಾಗು ಜೆಡಿಎಸ್ ತಲಾ ಒಂದು ಸ್ಥಾನ ಪಡೆಯಬಹುದು ಅಂತಾ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಸಾಗರದ ಮಂಕಳಲೆ ಹೆಲಿಪ್ಯಾಡ್’ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಇನ್ನೂ ಮೂರುವರೆ ವರ್ಷ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನೆರೆಹಾನಿ ಸಂದರ್ಭ ರಾಜ್ಯದಲ್ಲಿ ಬಿಜೆಪಿ ಮಾಡಿದ ಕೆಲಸ ಜನರಿಗೆ ಗೊತ್ತಿದೆ. ಬಿಜೆಪಿ ಸರ್ಕಾರದ ಆಡಳಿತಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದರು.
ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಹರತಾಳು ಹಾಲಪ್ಪ ಸೇರಿದಂತೆ ಹಲವರು ಈ ಸಂದರ್ಭ ಉಪಸ್ಥಿತರಿದ್ದರು.

ಬಳಿಕ ಸಾಗರದ ಮೇಲಿನಮನೆಯಲ್ಲಿ ನಡೆಯುತ್ತಿರುವ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಪುತ್ರಿ ಜಯಲಕ್ಷ್ಮಿ ಅವರ ಮದುವೆ ಸಮಾರಂಭದಲ್ಲಿ ಸಿಎಂ ಯಡಿಯೂರಪ್ಪ ಭಾಗವಹಿಸಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
Chief Minister B S Yedyurappa visits Sagara To attend the marriage of Vidhanasabha Speaker Vishweshwara Hegde Kageri’s daughter in Mankalale.
LATEST NEWS
- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

About The Editor
ನಿತಿನ್ ಆರ್.ಕೈದೊಟ್ಲು





