ಗಾಂಧಿ ಪಾರ್ಕ್ ಮುಂದೆ ಹೈ ಡ್ರಾಮಾ, ಉಪವಾಸ ಕುಳಿತ ಮಾಜಿ ಶಾಸಕ, ಕಾಂಗ್ರೆಸ್ ಕಾರ್ಯಕರ್ತರು ಅರೆಸ್ಟ್

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ ಲೈವ್.ಕಾಂ | SHIMOGA | 16 ಡಿಸೆಂಬರ್ 2019

ಪೌರತ್ವ ತಿದ್ದುಪಡಿ ಮಸೂದೆ ಸಂವಿಧಾನ ವಿರೋಧಿಯಾಗಿದೆ ಎಂದು ಆರೋಪಿಸಿ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ನೇತೃತ್ವದಲ್ಲಿ ಇವತ್ತು ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪೊಲೀಸರು ಉಪವಾಸ ಕುಳಿತಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿದ್ದಾರೆ.

https://www.facebook.com/liveshivamogga/videos/455330888488846/?t=4

ಗಾಂಧಿ ಪಾರ್ಕ್ ಮುಂಭಾಗ ಉಪವಾಸ ಸತ್ಯಾಗ್ರಹ ಆಯೋಜಿಸಲಾಗಿತ್ತು. ಮಾಜಿ ಶಾಸಕ ಪ್ರಸನ್ನಕುಮಾರ್, ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್, ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ರಮೇಶ್ ಹೆಗ್ಡೆ ಸೇರಿದಂತೆ ಹಲವರು ಸತ್ಯಾಗ್ರಹದಲ್ಲಿ ಭಾಗವಹಿಸಿದ್ದರು.

ದೇಶಕ್ಕೆ ಆತಂಕ ತಂದಿದೆ

ಪೌರತ್ವ ಕಾಯ್ದೆಗೆ ತಿದ್ದುಪಡಿ ತಂದು ಕೇಂದ್ರ ಸರ್ಕಾರ, ದೇಶದಲ್ಲಿ ಆತಂಕದ ಪರಿಸ್ಥಿತಿ ನಿರ್ಮಿಸಿದೆ. ಮೂರ್ನಾಲ್ಕು ತಲೆಮಾರಿನ ದಾಖಲೆಗಳನ್ನು ಒದಗಿಸಬೇಕು ಎಂದು ಹೇಳಲಾಗುತ್ತಿದೆ. ಈ ಮೂಲಕ ದೊಡ್ಡ ಮಟ್ಟದಲ್ಲಿ ಸಮಸ್ಯೆ ಸೃಷ್ಟಿಸಲಾಗುತ್ತಿದೆ ಎಂದು ಮಾಜಿ ಶಾಸಕ ಪ್ರಸನ್ನಕುಮಾರ್ ಆರೋಪಿಸಿದರು.

80291188 1001810970180323 2572881939417530368 n.jpg? nc cat=102& nc ohc=H1DX0a0O2mkAQkgbqVE9easY8ZjcvlwZNilrZDTc53oA4EVuOledDkAVw& nc ht=scontent.fblr11 1

ಸತ್ಯಾಗ್ರಹಿಗಳು ಅರೆಸ್ಟ್

ಗಾಂಧಿ ಪಾರ್ಕ್ ಮುಂದೆ ಸತ್ಯಾಗ್ರಹ ಮಾಡುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ. ಉಪವಾಸ ಸತ್ಯಾಗ್ರಹ ನಡೆಸದಂತೆ ಪೊಲೀಸರು ಮನವಿ ಸೂಚಿಸಿದ್ದರು. ಆದರೆ ಕಾಂಗ್ರೆಸ್ ಕಾರ್ಯಕರ್ತರು ಉಪವಾಸ ಕುಳಿತಿದ್ದರಿಂದ ಎಲ್ಲರನ್ನು ಬಂಧಿಸಲಾಯಿತು. ಈ ವೇಳೆ ಗಾಂಧಿ ಪಾರ್ಕ್ ಮುಂಭಾಗ ಕೆಲಕಾಲ ಹೈಡ್ರಾಮಾ ನಡೆಯಿತು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

Former MLA Prasanna Kumar and Congress Party Workers led a fasting protest in Shimoga Gandhi Park. Police Arrest the protesters.

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment